ಬ್ರೇಕಿಂಗ್ ನ್ಯೂಸ್
14-10-20 09:34 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ, ಅಕ್ಟೋಬರ್ .14: ಬಂಗಾಳಕೊಲ್ಲಿಯಲ್ಲಿ ಉಂಟಾದ ತೀವ್ರ ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತ ಮಂಗಳವಾರ ಬೆಳಿಗ್ಗೆ ಕಾಕಿನಾಡ ಕರಾವಳಿಯ ಮೂಲಕ ಆಂಧ್ರಪ್ರದೇಶವನ್ನು ದಾಟಿದೆ ಎಂದು ವಿಶಾಖಪಟ್ಟಣಂನ ಚಂಡಮಾರುತ ಎಚ್ಚರಿಕೆ ಕೇಂದ್ರ ಮಾಹಿತಿ ನೀಡಿದೆ.


ಪೂರ್ವ ಗೋದಾವರಿ ಜಿಲ್ಲೆಯ ತುನಿ ಮತ್ತು ವಿಶಾಖಪಟ್ಟಣಂನ ನರಸಿಪಟ್ಟಣಂ ಸಂಪರ್ಕ ರಸ್ತೆಯ ಮೇಲೆ ನದಿ ನೀರು ಉಕ್ಕಿಹರಿದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಪ್ರವಾಹದಲ್ಲಿ ಕೊಚ್ಚಿಹೋಗಿದೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಕಾರಿನಲ್ಲಿದ್ದ ದಂಪತಿಯನ್ನು ರಕ್ಷಿಸಿದರೂ, ಜತೆಗಿದ್ದ ಹಿರಿಯ ಮಹಿಳೆ ನೀರಿನಲ್ಲಿ ಮುಳುಗಿ ಮೃತಪಟ್ಟರು. ಸೋಮವಾರ ರಾತ್ರಿ ವಿಶಾಖಪಟ್ಟಣಂನಲ್ಲಿ ಕಲ್ಲು ಬಂಡೆಯೊಂದು ಮನೆಯ ಮೇಲೆ ಉರುಳಿಬಿದ್ದು 3 ವರ್ಷದ ಮಗು ಮತ್ತು ಮಗುವಿನ ತಾಯಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮಧ್ಯೆ, ವಿಶಾಖಪಟ್ಟಣಂ ಬಂದರಿನಲ್ಲಿ ಲಂಗರು ಹಾಕಲು ಸಜ್ಜಾಗಿದ್ದ ‘ಮಾ ಆಫ್ ಬಾಂಗ್ಲಾದೇಶ್’ ಎಂಬ ಹೆಸರಿನ ಹಡಗು ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಸಿಲುಕಿ ಉತ್ತರದತ್ತ ಚಲಿಸಿ ಬೀಚ್ ರಸ್ತೆಯ ತೆನ್ನೆಟಿ ಪಾರ್ಕ್ನ ಬಳಿ ದಡ ಸೇರಿದೆ. ಮಂಗಳವಾರ ಬೆಳಗ್ಗಿನವರೆಗಿನ 24 ಗಂಟೆಗಳ ಅವಧಿಯಲ್ಲಿ ಯನಾಮ್ನಲ್ಲಿ 25 ಸೆ.ಮೀ ಮಳೆಯಾಗಿದ್ದರೆ, ಅಮಲಾಪುರಂನಲ್ಲಿ 18 ಸೆ.ಮೀ, ತಡೆಪಲ್ಲೆಗುಡ್ಡಂ ಮತ್ತು ನುವಿಡ್ನಲ್ಲಿ ತಲಾ 18 ಸೆ.ಮೀ, ವಿಶಾಖಪಟ್ಟಣಂನಲ್ಲಿ 8 ಸೆ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
48 ಗಂಟೆಗಳ ಕಾಲ ಸುರಿದ ನಿರಂತರ ಮಳೆಯಲ್ಲಿ ಆಂಧ್ರ ಪ್ರದೇಶ ಮೂಲದ ಮೂವರು ಹಾಗೂ ತೆಲಂಗಾಣ ಮೂಲದ ಮೂವರು ಮೃತಪಟ್ಟಿದ್ದಾರೆ.
At least six people have died, three in Andhra Pradesh and three in Telangana after continuous rain in the last 48 hours.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm