ಬ್ರೇಕಿಂಗ್ ನ್ಯೂಸ್
24-11-22 06:42 pm HK News Desk ದೇಶ - ವಿದೇಶ
ಹೈದರಾಬಾದ್, ನ.24 : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ಅಪರಾಧ ಪ್ರಕ್ರಿಯೆಗಳ ಸಂಹಿತೆ(ಸಿಆರ್ ಪಿಸಿ) ಸೆಕ್ಷನ್ 41ಎ ಅಡಿಯಲ್ಲಿ ಹೊಸತಾಗಿ ನೋಟಿಸ್ ನೀಡುವಂತೆ ತೆಲಂಗಾಣದ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್ ಗುರುವಾರ ಆದೇಶ ಮಾಡಿದೆ.
ಈ ಕುರಿತ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವಿಜಯಸೇನ್ ರೆಡ್ಡಿ ನೇತೃತ್ವದ ಏಕಸದಸ್ಯ ಪೀಠ, ಅಡ್ವೊಕೇಟ್ ಜನರಲ್(ಎಜಿ) ಬಿ.ಎಸ್ ಪ್ರಸಾದ್ ಅವರಿಗೆ ಈ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಪ್ರಸಾದ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್(ಎಎಜಿ) ಜೆ ರಾಮಚಂದರ್ ರಾವ್ ನ್ಯಾಯಾಲಯಕ್ಕೆ ಹಾಜರಾಗಿದ್ದು ಎಸ್ಐಟಿ ಮತ್ತು ದೆಹಲಿ ಪೊಲೀಸರ ಪ್ರಯತ್ನಗಳ ಹೊರತಾಗಿಯೂ ಸಂತೋಷ್ ವಿಚಾರಣೆಗೆ ಹಾಜರಾಗಲಿಲ್ಲ ಎಂದು ತಿಳಿಸಿದರು. ನವೆಂಬರ್ 20 ರಂದು ನವದೆಹಲಿಯ ಬಿಜೆಪಿ ಕಚೇರಿಗೆ ಸಮನ್ಸ್ ತಲುಪಿಸಲಾಗಿದೆ. ಆದರೂ ಆರೋಪಿ ಸಂತೋಷ್ ವಿಚಾರಣೆಗೆ ಹಾಜರಾಗಿಲ್ಲ. ವಿಚಾರಣೆಯಲ್ಲಿ ಪ್ರಮುಖ ಅಂಶವಾಗಿರುವ ಇಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಅಳಿಸಿ ಹಾಕಲು ಸಂತೋಷ್ ಉದ್ದೇಶಪೂರ್ವಕವಾಗಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ವಿಳಂಬ ಮಾಡುತ್ತಿದ್ದಾರೆ ಎಂದು ಅಟೋರ್ನಿ ಜನರಲ್ ವಾದಿಸಿದರು.
![]()
ಸಂತೋಷ್ ಅವರು ತಮ್ಮ ಮೊಬೈಲ್ ಸಾಧನದಿಂದ ಡೇಟಾವನ್ನು ಅಳಿಸಿದರೆ ಮತ್ತು ಮಹತ್ವದ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ ನಂತರ ಎಸ್ಐಟಿ ಮುಂದೆ ಹಾಜರಾಗುವುದು ನಿಷ್ಪ್ರಯೋಜಕವಾಗಲಿದೆ ಎಂದು ಎಎಜಿ ರಾವ್ ಕೋರ್ಟ್ ಗಮನಕ್ಕೆ ತಂದರು. ಈಗಾಗಲೇ ನ.21ರಂದು ವಿಚಾರಣೆಗೆ ಹಾಜರಾಗದೇ ಇರುವುದರಿಂದ ಎಸ್ಐಟಿ ತಂಡ ಸಂತೋಷ್ ಗೆ ಸಮನ್ಸ್ ಜಾರಿ ಮಾಡಿತ್ತು. ದೆಹಲಿ ಬಿಜೆಪಿ ಕಚೇರಿಗೆ ಸಮನ್ಸ್ ನೋಟಿಸ್ ನೀಡಲಾಗಿತ್ತು.
BJP general secretary (Organisation) B L Santhosh has been caught in the midst of a political battle between his party and the Telengana Rashtriya Samithy (TRS) led by Telengana chief minister K Chandrashekhar Rao.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm