ಬ್ರೇಕಿಂಗ್ ನ್ಯೂಸ್
14-10-20 11:16 am Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್. 14 : ಒಂದು ವರ್ಷಕ್ಕೂ ಹೆಚ್ಚು ಕಾಲ ಬಂಧನದಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಗೃಹ ಬಂಧನಕ್ಕೆ ಗುರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಬರೊಬ್ಬರಿ 14 ತಿಂಗಳ ಬಳಿಕ ಬಿಡುಗಡೆಯಾಗಿದ್ದಾರೆ. ಈ ಮೂಲಕ ಕಣಿವೆಯ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಗೃಹ ಬಂಧನದಿಂದ ಮುಕ್ತಿ ಪಡೆದಂತಾಗಿದೆ.
2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಆರ್ಟಿಕಲ್ 370 ತೆಗೆಯುವ ನಿರ್ಧಾರ ಕೈಗೊಂಡ ಸಂದರ್ಭದಲ್ಲಿ ಮುಫ್ತಿ ಅವರನ್ನ ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಈ ವರ್ಷದ ಫೆಬ್ರವರಿ 5ರಂದು ಸಾರ್ವಜನಿಕ ಸುರಕ್ಷತೆ ಕಾಯ್ದೆ ಪಿಎಸ್ಎ ಅಡಿಯಲ್ಲಿ ಅವರ ಬಂಧನದ ಅವಧಿಯನ್ನು ಮುಂದುವರಿಸಲಾಗಿತ್ತು. ಅವರ ಬಂಧನ ಅವಧಿಯನ್ನು ಇದುವರೆಗೂ ವಿಸ್ತರಿಸುತ್ತಾ ಬರಲಾಗಿತ್ತು. ಮೆಹಬೂಬ ಅವರ ಮಗಳು ಇಲ್ತಿಜಾ ಮುಫ್ತಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಮೆಹಬೂಬ ಮುಫ್ತಿ ಬಿಡುಗಡೆಗೆ ಗಡುವು ನಿಗದಿಪಡಿಸಿತ್ತು.
ಇನ್ನು ಬಿಡುಗಡೆಯಾಗುತ್ತಿದ್ದಂತೆ ಕಪ್ಪು ಆಡಿಯೋ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮೆಹಬೂಬಾ ಕಿಡಿ ಕಾರಿದ್ದು, ಟ್ವಿಟರ್ನಲ್ಲಿಯೂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಒಂದೂ ವರ್ಷಕ್ಕೂ ಹೆಚ್ಚು ಕಾಲ ಅಂದರೆ 14 ತಿಂಗಳ ಬಳಿಕ ಬಿಡುಗಡೆ ಹೊಂದಿದ್ದೇನೆ. 370ನೇ ವಿಧಿ ರದ್ದುಗೊಳಿಸಿದ ಕೇಂದ್ರದ ಕ್ರೂರ ನಿರ್ಧಾರದ ಬಗ್ಗೆ ನಾನು ಯಾವಾಗಲೂ ಯೋಚಿಸುತ್ತಿದ್ದೇನೆ. ಸರ್ಕಾರ ವಿಶೇಷ ಸ್ಥಾನಮಾನವನ್ನು ಮರಳಿಸಬೇಕು ಹಾಗೂ ದೇಶದ ಹಲವು ಭಾಗಗಳಲ್ಲಿ ಜೈಲಿನಲ್ಲಿ ಬಳಲುತ್ತಿರುವವರನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಇದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಆದರೆ ನಾವೆಲ್ಲರೂ ಹೋರಾಡಬೇಕಿದೆ ಎಂದಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am