ಬ್ರೇಕಿಂಗ್ ನ್ಯೂಸ್
26-11-22 12:47 pm HK News Desk ದೇಶ - ವಿದೇಶ
ಶ್ರೀನಗರ, ನ.26: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಅದೇ ಮಾದರಿಯ ಕುಕ್ಕರ್ ಬಾಂಬ್ ಪತ್ತೆಯಾಗಿದೆ. ಕಣಿವೆ ರಾಜ್ಯ ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹೀಬ್ ಎಂಬಲ್ಲಿ ಕುಕ್ಕರ್ ನಲ್ಲಿ ಐಇಡಿ ಸ್ಫೋಟಕಗಳನ್ನು ಇಟ್ಟು ಸ್ಫೋಟಿಸಲು ಸಂಚು ರೂಪಿಸಿದ್ದು ಪತ್ತೆಯಾಗಿದೆ.
ಶೋಪಿಯಾನ್ ಪೊಲೀಸರು ಮತ್ತು ಸೇನಾಪಡೆಯ ರಾಷ್ಟ್ರೀಯ ರೈಫಲ್ಸ್ ವಿಭಾಗದ ಯೋಧರು ಜಂಟಿ ಕಾರ್ಯಾಚರಣೆಯಲ್ಲಿ ಕುಕ್ಕರ್ ಬಾಂಬ್ ಪತ್ತೆ ಮಾಡಿದ್ದಾರೆ. ಪೊಲೀಸರು ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರಿಂದ ದೊಡ್ಡ ದುರಂತ ತಪ್ಪಿದೆ. ನವೆಂಬರ್ ತಿಂಗಳ ಆರಂಭದಲ್ಲಿ ರಾಮ್ ಬನ್ ಜಿಲ್ಲೆಯಲ್ಲಿ ಐಇಡಿ ಮಾದರಿಯ ಸ್ಫೋಟಕ ಸಾರ್ವಜನಿಕ ಸಾರಿಗೆ ಬಸ್ಸಿನಲ್ಲಿ ಪತ್ತೆಯಾಗಿತ್ತು. ಕೂಡಲೇ ಅದನ್ನು ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿ, ತೆರವು ಮಾಡಿತ್ತು. ಬಸ್ಸಿನಲ್ಲಿ ಅನಾಥ ಬ್ಯಾಗ್ ಒಂದು ಪತ್ತೆಯಾಗಿತ್ತು. ಆನಂತರ, ಸಿಆರ್ ಪಿಎಫ್ ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಬಾಂಬ್ ಅನ್ನುವುದು ದೃಢಪಟ್ಟಿತ್ತು.


ಇದೀಗ ಐಇಡಿ ಸ್ಫೋಟಕವನ್ನು ಕುಕ್ಕರ್ ಬಾಕ್ಸ್ ನಲ್ಲಿಟ್ಟು ಭಾರೀ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದು ಪತ್ತೆಯಾಗಿದೆ. ಬಾಂಬ್ ಕನೆಕ್ಟ್ ಮಾಡಿ, ಕುಕ್ಕರ್ ಒಳಗೆ ಇಟ್ಟರೆ ಒಳಗಿನ ಒತ್ತಡ ಹೆಚ್ಚುತ್ತಾ ಹೋಗಿ ಸಹಜ ಸಾಮರ್ಥ್ಯದ ಸ್ಫೋಟಕ್ಕಿಂತ ಹತ್ತು ಪಟ್ಟು ಹೆಚ್ಚು ಹಾನಿ ಮಾಡುವಷ್ಟು ಸ್ಫೋಟಗೊಳ್ಳುತ್ತದೆ. ಅದಕ್ಕಾಗಿ ಉಗ್ರರು ದೊಡ್ಡ ಮಟ್ಟದ ಹಾನಿ ಮಾಡುವ ಉದ್ದೇಶದಿಂದ ಈ ರೀತಿ ಮಾಡುತ್ತಾರೆ.
In a joint operation by Shopian Police and Indian Army's 44 Rashtriya Rifles on Friday, an Improvised Explosive Device (IED) planted in a cooker was detected at Imamsahib in Shopian.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm