ಬ್ರೇಕಿಂಗ್ ನ್ಯೂಸ್
14-10-20 12:40 pm Headline Karnataka News Network ದೇಶ - ವಿದೇಶ
ಚೆನ್ನೈ , ಅಕ್ಟೋಬರ್ .14: ತಮಿಳು ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ, ರಾಜಕಾರಣಿ ವಿಜಯಕಾಂತ್ ನಿವಾಸಕ್ಕೆ ಕಿಡಿಗೇಡಿಗಳು ಬಾಂಬ್ ಹಾಕುವ ಬೆದರಿಕೆ ಒಡ್ಡಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಇಬ್ಬರ ಮನೆಗಳಿಗೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಮನೆಯಲ್ಲಿ ಸಂಶಯಿತ ವಸ್ತು ಯಾವುದೂ ಸಿಗಲಿಲ್ಲ. ಹೀಗಾಗಿ ಇದೊಂದು ಸುಳ್ಳು ಬೆದರಿಕೆ ಆಗಿರಬಹುದು ಎನ್ನಲಾಗುತ್ತಿದೆ.
ನಟ ಧನುಷ್ ಅವರ ಚೆನ್ನೈನಲ್ಲಿರುವ ಅಭಿರಾಮಪುರಂ ನಿವಾಸ ಹಾಗೂ ವಿಜಯಕಾಂತ್ ಅವರ ವಿರುಗಂಬಕ್ಕಂನ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು, ಇಬ್ಬರ ನಿವಾಸಗಳಿಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಈ ಕರೆ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಬಳಿಕ ಎರಡೂ ಕರೆಗಳನ್ನು ಒಬ್ಬನೇ ಮಾಡಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ವ್ಯಕ್ತಿಯ ಬಗ್ಗೆ ಪೊಲೀಸರು ತಪಾಸಣೆ ನಡೆಸಿದ್ದಾರೆ. ಆತನ ಬಗ್ಗೆ ಮಾಹಿತಿ ಗೊತ್ತಾಗಿದ್ದು ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ತಿಂಗಳಿಂದ ಕಾಲಿವುಡ್ ನಟರಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿದೆ. ಈ ಮೊದಲು ರಜನಿಕಾಂತ್, ವಿಜಯ್ ಮತ್ತು ಸೂರ್ಯ ಅವರಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದರೆ ಈ ಕರೆಗಳನ್ನು ಮಾನಸಿಕ ಅಸ್ವಸ್ಥ ವ್ಯಕ್ತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
ಜುಲೈ 18ರಂದು ನಟ ಅಜಿತ್ ಮನೆಯಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು. ಬಳಿಕ ಬಾಂಬ್ ಸ್ಕ್ವಾಡ್ ಅಧಿಕಾರಿಗಳು ಇಡೀ ಮನೆಯನ್ನು ಜಾಲಾಡಿದ್ದರೂ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಇದು ಸುಳ್ಳು ಕರೆ ಎಂದಿದ್ದರು.
Bomb threats were issued to Tamil stars Dhanush and Vijayakanth's residences in Chennai. The police officials immediately searched their houses and found it be a hoax.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm