ಬ್ರೇಕಿಂಗ್ ನ್ಯೂಸ್
14-10-20 12:40 pm Headline Karnataka News Network ದೇಶ - ವಿದೇಶ
ಚೆನ್ನೈ , ಅಕ್ಟೋಬರ್ .14: ತಮಿಳು ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ, ರಾಜಕಾರಣಿ ವಿಜಯಕಾಂತ್ ನಿವಾಸಕ್ಕೆ ಕಿಡಿಗೇಡಿಗಳು ಬಾಂಬ್ ಹಾಕುವ ಬೆದರಿಕೆ ಒಡ್ಡಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಇಬ್ಬರ ಮನೆಗಳಿಗೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಮನೆಯಲ್ಲಿ ಸಂಶಯಿತ ವಸ್ತು ಯಾವುದೂ ಸಿಗಲಿಲ್ಲ. ಹೀಗಾಗಿ ಇದೊಂದು ಸುಳ್ಳು ಬೆದರಿಕೆ ಆಗಿರಬಹುದು ಎನ್ನಲಾಗುತ್ತಿದೆ.
ನಟ ಧನುಷ್ ಅವರ ಚೆನ್ನೈನಲ್ಲಿರುವ ಅಭಿರಾಮಪುರಂ ನಿವಾಸ ಹಾಗೂ ವಿಜಯಕಾಂತ್ ಅವರ ವಿರುಗಂಬಕ್ಕಂನ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು, ಇಬ್ಬರ ನಿವಾಸಗಳಿಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಈ ಕರೆ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಬಳಿಕ ಎರಡೂ ಕರೆಗಳನ್ನು ಒಬ್ಬನೇ ಮಾಡಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ವ್ಯಕ್ತಿಯ ಬಗ್ಗೆ ಪೊಲೀಸರು ತಪಾಸಣೆ ನಡೆಸಿದ್ದಾರೆ. ಆತನ ಬಗ್ಗೆ ಮಾಹಿತಿ ಗೊತ್ತಾಗಿದ್ದು ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ತಿಂಗಳಿಂದ ಕಾಲಿವುಡ್ ನಟರಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿದೆ. ಈ ಮೊದಲು ರಜನಿಕಾಂತ್, ವಿಜಯ್ ಮತ್ತು ಸೂರ್ಯ ಅವರಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದರೆ ಈ ಕರೆಗಳನ್ನು ಮಾನಸಿಕ ಅಸ್ವಸ್ಥ ವ್ಯಕ್ತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
ಜುಲೈ 18ರಂದು ನಟ ಅಜಿತ್ ಮನೆಯಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು. ಬಳಿಕ ಬಾಂಬ್ ಸ್ಕ್ವಾಡ್ ಅಧಿಕಾರಿಗಳು ಇಡೀ ಮನೆಯನ್ನು ಜಾಲಾಡಿದ್ದರೂ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಇದು ಸುಳ್ಳು ಕರೆ ಎಂದಿದ್ದರು.
Bomb threats were issued to Tamil stars Dhanush and Vijayakanth's residences in Chennai. The police officials immediately searched their houses and found it be a hoax.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am