ಬ್ರೇಕಿಂಗ್ ನ್ಯೂಸ್
27-11-22 12:53 pm HK News Desk ದೇಶ - ವಿದೇಶ
ಬಿಹಾರ, ನ.27: ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವು ಹೊಸ ಯೋಜನೆಯೊಂದನ್ನು ರೂಪಿಸಿದೆ. ಮದ್ಯದ ವ್ಯವಹಾರವನ್ನು ತೊರೆದು ಹೊಸ ಜೀವನೋಪಾಯವನ್ನು ಕಂಡುಕೊಳ್ಳುವವರಿಗೆ ಬೆಂಬಲ ನೀಡುವ ಉದ್ದೇಶದಿಂದ ಈ ನವೀನ ಯೋಜನೆಯನ್ನು ಪರಿಚಯಿಸಲಾಗಿದೆ. ರಾಜ್ಯದಲ್ಲಿ ಮದ್ಯ ಮಾರಾಟ ವ್ಯವಹಾರದಿಂದ ಹೊರಬರುವವರಿಗೆ ಸರ್ಕಾರ ನೆರವು ನೀಡಲಿದೆ.
ಇಂಡಿಯಾ ಟುಡೇ ವರದಿಯ ಪ್ರಕಾರ, ಈ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮತ್ತು ಮದ್ಯವನ್ನು ಒಳಗೊಂಡಿರುವ ತಮ್ಮ ಪ್ರಸ್ತುತ ವ್ಯವಹಾರದಿಂದ ಹೊರಬರುವ ಜನರಿಗೆ ಸರ್ಕಾರದಿಂದ ಒಂದು ಲಕ್ಷ ರೂಪಾಯಿಗಳನ್ನು ಒದಗಿಸಲಾಗುತ್ತದೆ. ಈ ಯೋಜನೆಯು ರಾಜ್ಯದಲ್ಲಿ ಅಕ್ರಮ ಮದ್ಯದ ವ್ಯಾಪಾರ ಮತ್ತು ನಕಲಿ ಮದ್ಯ ಮಾರಾಟವನ್ನು ತಡೆಯುವ ಗುರಿ ಹೊಂದಿದೆ.
ಬಿಹಾರ ಸಿಎಂ ನಿತೀಶ್ ಕುಮಾರ್ ಅವರು, ಮಾದಕ ವ್ಯಸನ ನಿರ್ಮೂಲನಾ ದಿನದಂದು ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಹಾರದಲ್ಲಿ ನಾವು ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದೇವೆ ಎಂದು ಅವರು ಭರವಸೆ ನೀಡಿದ್ದಾರೆ. “ಸುಸ್ಥಿರ ಜೀವನೋಪಾಯ ಯೋಜನೆಯಡಿ, ಮದ್ಯದ ವ್ಯವಹಾರ ಮಾಡುತ್ತಿರುವ ಜನರಿಗೆ ಮತ್ತೊಂದು ಹೊಸ ಉದ್ಯೋಗವನ್ನು ಪ್ರಾರಂಭಿಸಲು ನೆರವು ನೀಡಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಇದರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ,” ಎಂದು ಅವರು ಹೇಳಿದ್ದಾರೆ.
“ನಿಷೇಧದ ಬಗ್ಗೆ ಜನರು ಜಾಗೃತರಾಗುವುದು ಅವಶ್ಯಕ. ಸಮಾಜ ಸುಧಾರಣಾ ಅಭಿಯಾನ ನಿರಂತರವಾಗಿ ನಡೆಯಬೇಕು. ಆ ಮೂಲಕ ರಾಜ್ಯವೂ ಪ್ರಗತಿಯಾಗುತ್ತದೆ ಮತ್ತು ಎಲ್ಲರೂ ಪ್ರಗತಿ ಹೊಂದುತ್ತಾರೆ” ಎಂದು ಕುಮಾರ್ ಹೇಳಿದರು.

2016ರ ಏಪ್ರಿಲ್ 5ರಿಂದ ಬಿಹಾರದಲ್ಲಿ ಮದ್ಯವನ್ನು ನಿಷೇಧಿಸಲಾಗಿದೆ. ಅದರ ನಡುವೆ ತಪ್ಪು ಕಂಡುಬಂದರೆ, ಅಪರಾಧಿಗಳು 10 ವರ್ಷಗಳವರೆಗೆ ಜೈಲು ಶಿಕ್ಷೆ ಸೇರಿದಂತೆ ಗಂಭೀರ ಶಿಕ್ಷೆಗೆ ಗುರಿಯಾಗುತ್ತಾರೆ. ಮದ್ಯದ ತಿದ್ದುಪಡಿ ಮಸೂದೆಯನ್ನು ಬಿಹಾರ ಸರ್ಕಾರವು 2022ರ ಮಾರ್ಚ್ ತಿಂಗಳಲ್ಲಿ ಅಂಗೀಕರಿಸಿತು. ಅದರಂತೆ ಏಪ್ರಿಲ್ 1ರಿಂದ ಅದನ್ನು ಜಾರಿಗೆ ತರಲಾಯಿತು.
ಬಿಹಾರ ಸರ್ಕಾರವು ಮದ್ಯ ನಿಷೇಧವನ್ನು ಯಶಸ್ವಿಗೊಳಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಿದೆ. ಆದರೆ ಅದು ಅಂದುಕೊಂಡಂತೆ ನಿಖರವಾಗಿ ಯೋಜನೆ ಜಾರಿಗೆ ಬಂದಿಲ್ಲ. ನಿತೀಶ್ ಕುಮಾರ್ ಅವರ ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಅವರು ಬಿಹಾರದಲ್ಲಿ ಮದ್ಯ ನಿಷೇಧವು ಯಶಸ್ವಿಯಾಗಲಿಲ್ಲ ಎಂದು ಇತ್ತೀಚೆಗೆ ಒಪ್ಪಿಕೊಂಡಿದ್ದರು.
“ಬಿಹಾರದಲ್ಲಿ ಮದ್ಯ ನಿಷೇಧವು ಯಶಸ್ವಿಯಾಗದಿದ್ದರೂ, ನಿಷೇಧದಿಂದ ಸಮಾಜವು ಅಗಾಧ ಪ್ರಯೋಜನ ಪಡೆದಿದೆ” ಎಂದು ಕುಶ್ವಾಹಾ ಈ ತಿಂಗಳ ಆರಂಭದಲ್ಲಿ ಹೇಳಿದ್ದರು.
In a bid to further strengthen the ban on alcohol in Bihar, Chief Minister Nitish Kumar rolled out a new approach to tackle the menace of illegal and spurious liquor trade in the state. CM Kumar said that his government would give an amount of Rs 1 lakh to those who give up their liquor business to earn a livelihood.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm