ಭಾರತ್ ಜೋಡೊ ಯಾತ್ರೆಯಲ್ಲಿ ನೂಕುನುಗ್ಗಲು ; ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಆಸ್ಪತ್ರೆಗೆ ! 

28-11-22 12:08 pm       HK News Desk   ದೇಶ - ವಿದೇಶ

ಮಧ್ಯಪ್ರದೇಶದ ಇಂದೋರ್ ನಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ನೂಕುನುಗ್ಗಲು ಉಂಟಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೈ ಕಾಲಿಗೆ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ. 

ಭೋಪಾಲ್, ನ.28 : ಮಧ್ಯಪ್ರದೇಶದ ಇಂದೋರ್ ನಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ನೂಕುನುಗ್ಗಲು ಉಂಟಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೈ ಕಾಲಿಗೆ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ. 

ಕಾರ್ಯಕರ್ತರ ಮಧ್ಯೆ ನೂಕುನುಗ್ಗನಲ್ಲಿ ಸಿಲುಕಿದ ವೇಣುಗೋಪಾಲ್ ಅವರ ಕೈ ಮತ್ತು ಮೊಣಕಾಲಿಗೆ ಗಾಯಗಳಾಗಿವೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ವೇಣುಗೋಪಾಲ್ ಅವರನ್ನು ತಳ್ಳಿಕೊಂಡು ಅಭಿಮಾನಿಗಳು ನುಗ್ಗಿ ಬಂದಿದ್ದಾರೆ. ಈ ವೇಳೆ, ಭದ್ರತಾ ಪಡೆ ಮತ್ತು ಪೊಲೀಸರು ಜನರನ್ನು ನಿಯಂತ್ರಸಲು ವಿಫಲರಾಗಿದ್ದಾರೆ. 

ನೂಕುನುಗ್ಗಲಿನಲ್ಲಿ ನೆಲಕ್ಕೆ ಬಿದ್ದು ಗಾಯಗೊಂಡ ವೇಣುಗೋಪಾಲ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವರದಿಗಳ ಪ್ರಕಾರ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಕಾರ್ಯಕರ್ತರು ನುಗ್ಗಿದ್ದರಿಂದ ಘಟನೆ ಸಂಭವಿಸಿದೆ. ವೇಣುಗೋಪಾಲ್ ಅವರು ಭಾರತ್ ಜೋಡೋ ಯಾತ್ರೆಗಾಗಿ ಏರ್ಪಡಿಸಲಾಗಿದ್ದ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Congress general secretary KC Venugopal on Sunday fell down and suffered injuries during the fifth day of Madhya Pradesh's leg of Bharat Jodo Yatra in Indore. Venugopal sustained injuries on his hand and knee from a stampede and was given first aid at the Yatra camp. As per reports, the reason for the stampede that led to KC Venugopal's injury was the police personnel's failure to control the huddle, formed to meet Rahul Gandhi. However, the leader joined the foot march soon after.