ಬ್ರೇಕಿಂಗ್ ನ್ಯೂಸ್
28-11-22 12:12 pm HK News Desk ದೇಶ - ವಿದೇಶ
ಶ್ರೀನಗರ, ನ.28 : 24 ಗಂಟೆಯೊಳಗೆ ಸರ್ಕಾರಿ ನಿವಾಸ ಖಾಲಿ ಮಾಡಿ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಜಮ್ಮು ಕಾಶ್ಮೀರ ಸರ್ಕಾರ ನೋಟಿಸ್ ನೀಡಿದೆ.
ಮೆಹಬೂಬಾ ಮುಫ್ತಿ, ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಸರ್ಕಾರಿ ಬಂಗಲೆಯಲ್ಲಿ ವಾಸವಿದ್ದಾರೆ. ಇದನ್ನು ಖಾಲಿ ಮಾಡಬೇಕು ಎಂದು ಅವರಿಗೆ ಒಂದು ತಿಂಗಳ ಹಿಂದೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಬಂಗಲೆ ಖಾಲಿ ಮಾಡದ ಕಾರಣ, ಇದೀಗ ಮತ್ತೆ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದ್ದು, 24 ಗಂಟೆಗಳ ಗಡುವು ನೀಡಲಾಗಿದೆ.
'24 ಗಂಟೆಯೊಳಗೆ ಬಂಗಲೆ ಖಾಲಿ ಮಾಡಲು ನಿಮಗೆ ನಿರ್ದೇಶಿಸಲಾಗಿದೆ. ಇದು ತಪ್ಪಿದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು' ಎಂದು ನೋಟಿಸ್ನಲ್ಲಿ ಹೇಳಲಾಗಿದೆ. ಬಂಗಲೆ ಖಾಲಿ ಮಾಡಲು ನನಗೆ ನೋಟಿಸ್ ನೀಡಲಾಗಿದೆ ಎಂದು ಮೆಹಬೂಬಾ ನವೆಂಬರ್ 20 ರಂದು ಹೇಳಿದ್ದರು.
ದೇಶದ ಎಲ್ಲಾ ರಾಜ್ಯಗಳಲ್ಲಿ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು ಅಥವಾ ಮಂತ್ರಿಗಳಿಗೆ ಸರ್ಕಾರಿ ಬಂಗಲೆಗಳನ್ನು ನೀಡಲಾಗುತ್ತದೆ. ಅಧಿಕಾರಾವಧಿ ಮುಗಿದ ಬಳಿಕ ಅದನ್ನು ತೆರವುಗೊಳಿಸಬೇಕು. ಆದರೆ ಜಮ್ಮು ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಗಳಿಗೆ ಜೀವನ ಪರ್ಯಂತ ಸರ್ಕಾರಿ ಬಂಗಲೆ ನೀಡುವ ಕಾನೂನು ಇತ್ತು.
2019ರಲ್ಲಿ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ಈ ನಿಯಮ ರದ್ದುಗೊಂಡಿತ್ತು. ಹೀಗಾಗಿ 2020ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲ ಹಾಗೂ ಗುಲಾಂ ನಬಿ ಅಜಾದ್ ಈ ಮೊದಲೇ ಸರ್ಕಾರಿ ಬಂಗಲೆ ತೊರೆದಿದ್ದರು.
Former Jammu and Kashmir Chief Minister and Peoples Democratic Party chief Mehbooba Mufti has been served a notice to vacate the government quarter she is occupying in south Kashmir’s Anantnag District by the Jammu and Kashmir administration, officials said. The notice was served to the former CM on Saturday to vacate quarter number 7 at Housing Colony Khanabal within 24 hours.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm