ಬ್ರೇಕಿಂಗ್ ನ್ಯೂಸ್
28-11-22 12:12 pm HK News Desk ದೇಶ - ವಿದೇಶ
ಶ್ರೀನಗರ, ನ.28 : 24 ಗಂಟೆಯೊಳಗೆ ಸರ್ಕಾರಿ ನಿವಾಸ ಖಾಲಿ ಮಾಡಿ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಜಮ್ಮು ಕಾಶ್ಮೀರ ಸರ್ಕಾರ ನೋಟಿಸ್ ನೀಡಿದೆ.
ಮೆಹಬೂಬಾ ಮುಫ್ತಿ, ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಸರ್ಕಾರಿ ಬಂಗಲೆಯಲ್ಲಿ ವಾಸವಿದ್ದಾರೆ. ಇದನ್ನು ಖಾಲಿ ಮಾಡಬೇಕು ಎಂದು ಅವರಿಗೆ ಒಂದು ತಿಂಗಳ ಹಿಂದೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಬಂಗಲೆ ಖಾಲಿ ಮಾಡದ ಕಾರಣ, ಇದೀಗ ಮತ್ತೆ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದ್ದು, 24 ಗಂಟೆಗಳ ಗಡುವು ನೀಡಲಾಗಿದೆ.
'24 ಗಂಟೆಯೊಳಗೆ ಬಂಗಲೆ ಖಾಲಿ ಮಾಡಲು ನಿಮಗೆ ನಿರ್ದೇಶಿಸಲಾಗಿದೆ. ಇದು ತಪ್ಪಿದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು' ಎಂದು ನೋಟಿಸ್ನಲ್ಲಿ ಹೇಳಲಾಗಿದೆ. ಬಂಗಲೆ ಖಾಲಿ ಮಾಡಲು ನನಗೆ ನೋಟಿಸ್ ನೀಡಲಾಗಿದೆ ಎಂದು ಮೆಹಬೂಬಾ ನವೆಂಬರ್ 20 ರಂದು ಹೇಳಿದ್ದರು.
ದೇಶದ ಎಲ್ಲಾ ರಾಜ್ಯಗಳಲ್ಲಿ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು ಅಥವಾ ಮಂತ್ರಿಗಳಿಗೆ ಸರ್ಕಾರಿ ಬಂಗಲೆಗಳನ್ನು ನೀಡಲಾಗುತ್ತದೆ. ಅಧಿಕಾರಾವಧಿ ಮುಗಿದ ಬಳಿಕ ಅದನ್ನು ತೆರವುಗೊಳಿಸಬೇಕು. ಆದರೆ ಜಮ್ಮು ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಗಳಿಗೆ ಜೀವನ ಪರ್ಯಂತ ಸರ್ಕಾರಿ ಬಂಗಲೆ ನೀಡುವ ಕಾನೂನು ಇತ್ತು.
2019ರಲ್ಲಿ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ಈ ನಿಯಮ ರದ್ದುಗೊಂಡಿತ್ತು. ಹೀಗಾಗಿ 2020ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲ ಹಾಗೂ ಗುಲಾಂ ನಬಿ ಅಜಾದ್ ಈ ಮೊದಲೇ ಸರ್ಕಾರಿ ಬಂಗಲೆ ತೊರೆದಿದ್ದರು.
Former Jammu and Kashmir Chief Minister and Peoples Democratic Party chief Mehbooba Mufti has been served a notice to vacate the government quarter she is occupying in south Kashmir’s Anantnag District by the Jammu and Kashmir administration, officials said. The notice was served to the former CM on Saturday to vacate quarter number 7 at Housing Colony Khanabal within 24 hours.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm