ಬ್ರೇಕಿಂಗ್ ನ್ಯೂಸ್
29-11-22 07:52 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.29: ಗುಜರಾತ್ ವಿಧಾನಸಭಾ ಚುನಾವಣೆಗೆ ಎರಡು ದಿನ ಇರುವಾಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.
ಅಹಮದಾಬಾದ್ನಲ್ಲಿ ಕಾಂಗ್ರೆಸ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಪ್ರಧಾನಿ ಮೋದಿ ತಮ್ಮ ಕೆಲಸವನ್ನು ಮರೆತು, ಕಾರ್ಪೊರೇಷನ್ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಪ್ರಚಾರ ಮಾಡುತ್ತಾರೆ ಮತ್ತು ತಮ್ಮ ಮುಖ ನೋಡಿ ಮತ ಹಾಕಿ ಎಂದು ಹೇಳುತ್ತಾರೆ. ಆದರೆ ನಾವು ನಿಮ್ಮ ಮುಖವನ್ನು ಎಷ್ಟು ಬಾರಿ ನೋಡಬೇಕು? ನಿಮಗೆ ಎಷ್ಟು ರೂಪಗಳಿವೆ? ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.
![]()
ನೀವು ಮೋದಿ ಹೆಸರಿನಲ್ಲಿ ಮತ ಕೇಳುವುದನ್ನು ನಾನು ನೋಡಿದ್ದೇನೆ, ಕಾರ್ಪೊರೇಷನ್ ಅಥವಾ ವಿಧಾನಸಭೆ ಚುನಾವಣೆಗಳಲ್ಲಿ ನಿಮ್ಮ ಅಭ್ಯರ್ಥಿಯ ಹೆಸರಿನಲ್ಲಿ ಮತ ಕೇಳಿ. ಮೋದಿ ಅವರು ಪುರಸಭೆಗೆ ಬಂದು ಕೆಲಸ ಮಾಡುತ್ತಾರೆಯೇ? ನಿಮ್ಮ ಕಷ್ಟದ ಸಮಯದಲ್ಲಿ ಅವರು ನಿಮಗೆ ಸಹಾಯ ಮಾಡುತ್ತಾರೆಯೇ? ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಖರ್ಗೆ ಅವರ "ರಾವಣ" ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು, ಯಾವುದೇ ಅಭಿವೃದ್ಧಿ ಅಜೆಂಡಾ ಮತ್ತು ಜನರ ಬೆಂಬಲವಿಲ್ಲದೆ, ಕಾಂಗ್ರೆಸ್ ಗುಜರಾತ್ ಮತ್ತು ಗುಜರಾತಿಗಳನ್ನು ನಿಂದಿಸಲು ಹೊರಟಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಜಿ ವಿರುದ್ಧ ಖರ್ಗೆ ಅವರು ನೀಡಿದ ಹೇಳಿಕೆ ಸಾಕ್ಷಿಯಾಗಿದೆ. ಗುಜರಾತಿಗಳ ಮೇಲಿನ ಅವರ ದ್ವೇಷಕ್ಕೆ ಇದು ಸಾಕ್ಷಿ. ಗುಜರಾತ್ ಜನರು ಈ ಬಾರಿಯೂ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ಗುಜರಾತ್ನಲ್ಲಿ 182 ಸದಸ್ಯ ಬಲದ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿ.1 ರ ಚುನಾವಣೆ ನಡೆಯುವ ಪ್ರದೇಶದಲ್ಲಿ ಕೊನೆಯ ದಿನದ ಪ್ರಚಾರ ಇಂದಿಗೆ ಕೊನೆಯಾಗಿದೆ.
A fresh political row has erupted after Congress president Mallikarjun Kharge's 'Ravan' remark about prime minister Narendra Modi. The Congress veteran made the remarks during a campaign rally in Ahmedabad on Monday, days before the Gujarat Assembly election.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm