ಬ್ರೇಕಿಂಗ್ ನ್ಯೂಸ್
29-11-22 07:52 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.29: ಗುಜರಾತ್ ವಿಧಾನಸಭಾ ಚುನಾವಣೆಗೆ ಎರಡು ದಿನ ಇರುವಾಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.
ಅಹಮದಾಬಾದ್ನಲ್ಲಿ ಕಾಂಗ್ರೆಸ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಪ್ರಧಾನಿ ಮೋದಿ ತಮ್ಮ ಕೆಲಸವನ್ನು ಮರೆತು, ಕಾರ್ಪೊರೇಷನ್ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಪ್ರಚಾರ ಮಾಡುತ್ತಾರೆ ಮತ್ತು ತಮ್ಮ ಮುಖ ನೋಡಿ ಮತ ಹಾಕಿ ಎಂದು ಹೇಳುತ್ತಾರೆ. ಆದರೆ ನಾವು ನಿಮ್ಮ ಮುಖವನ್ನು ಎಷ್ಟು ಬಾರಿ ನೋಡಬೇಕು? ನಿಮಗೆ ಎಷ್ಟು ರೂಪಗಳಿವೆ? ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.
![]()
ನೀವು ಮೋದಿ ಹೆಸರಿನಲ್ಲಿ ಮತ ಕೇಳುವುದನ್ನು ನಾನು ನೋಡಿದ್ದೇನೆ, ಕಾರ್ಪೊರೇಷನ್ ಅಥವಾ ವಿಧಾನಸಭೆ ಚುನಾವಣೆಗಳಲ್ಲಿ ನಿಮ್ಮ ಅಭ್ಯರ್ಥಿಯ ಹೆಸರಿನಲ್ಲಿ ಮತ ಕೇಳಿ. ಮೋದಿ ಅವರು ಪುರಸಭೆಗೆ ಬಂದು ಕೆಲಸ ಮಾಡುತ್ತಾರೆಯೇ? ನಿಮ್ಮ ಕಷ್ಟದ ಸಮಯದಲ್ಲಿ ಅವರು ನಿಮಗೆ ಸಹಾಯ ಮಾಡುತ್ತಾರೆಯೇ? ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಖರ್ಗೆ ಅವರ "ರಾವಣ" ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು, ಯಾವುದೇ ಅಭಿವೃದ್ಧಿ ಅಜೆಂಡಾ ಮತ್ತು ಜನರ ಬೆಂಬಲವಿಲ್ಲದೆ, ಕಾಂಗ್ರೆಸ್ ಗುಜರಾತ್ ಮತ್ತು ಗುಜರಾತಿಗಳನ್ನು ನಿಂದಿಸಲು ಹೊರಟಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಜಿ ವಿರುದ್ಧ ಖರ್ಗೆ ಅವರು ನೀಡಿದ ಹೇಳಿಕೆ ಸಾಕ್ಷಿಯಾಗಿದೆ. ಗುಜರಾತಿಗಳ ಮೇಲಿನ ಅವರ ದ್ವೇಷಕ್ಕೆ ಇದು ಸಾಕ್ಷಿ. ಗುಜರಾತ್ ಜನರು ಈ ಬಾರಿಯೂ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ಗುಜರಾತ್ನಲ್ಲಿ 182 ಸದಸ್ಯ ಬಲದ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿ.1 ರ ಚುನಾವಣೆ ನಡೆಯುವ ಪ್ರದೇಶದಲ್ಲಿ ಕೊನೆಯ ದಿನದ ಪ್ರಚಾರ ಇಂದಿಗೆ ಕೊನೆಯಾಗಿದೆ.
A fresh political row has erupted after Congress president Mallikarjun Kharge's 'Ravan' remark about prime minister Narendra Modi. The Congress veteran made the remarks during a campaign rally in Ahmedabad on Monday, days before the Gujarat Assembly election.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 11:04 pm
Mangalore Correspondent
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
Harish Kumar, Koli Anka Issue: ಕೋಳಿ ಅಂಕ ವಿಚಾರ...
03-01-26 08:12 pm
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm