ಬ್ರೇಕಿಂಗ್ ನ್ಯೂಸ್
03-12-22 11:12 pm HK News Desk ದೇಶ - ವಿದೇಶ
ಚೆನ್ನೈ, ಡಿ.3 : ಮತಾಂತರಗೊಂಡವರಿಗೆ ಯಾವುದೇ ಮೀಸಲು ನೀಡುವಂತಿಲ್ಲ ಎಂಬ ಮಹತ್ವದ ಆದೇಶ ಹೊರಬಿದ್ದಿದೆ. ಮತಾಂತರಗೊಂಡವರು ತಮ್ಮ ಹಿಂದಿನ ಜಾತಿಯ ಮೀಸಲಾತಿಯನ್ನು ಕೇಳುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ.
ಇಸ್ಲಾಮ್ಗೆ ಮತಾಂತರಗೊಂಡಿದ್ದ ವ್ಯಕ್ತಿಯೊಬ್ಬ ಮೀಸಲಾತಿ ಸಲುವಾಗಿ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ ಶನಿವಾರ ಈ ಆದೇಶವನ್ನು ನೀಡಿದೆ.
ಇನ್ನೊಂದು ಧರ್ಮಕ್ಕೆ ಮತಾಂತರಗೊಂಡ ಮೇಲೆ ಜಾತಿಯ ಮೀಸಲಾತಿ ಕೇಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಹಿಂದುಳಿದ ವರ್ಗದ ಹಿಂದು ವ್ಯಕ್ತಿಯೊಬ್ಬ ಇಸ್ಲಾಮ್ಗೆ ಮತಾಂತರಗೊಂಡು ಜಾತಿ ಮೀಸಲಾತಿ ಕೇಳಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಧೀಶ ಜಿ.ಆರ್. ಸ್ವಾಮಿನಾಥನ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
ದೂರುದಾರ ವ್ಯಕ್ತಿ 2008ರಲ್ಲಿ ಇಸ್ಲಾಮ್ಗೆ ಮತಾಂತರಗೊಂಡಿದ್ದು, 2018ರಲ್ಲಿ ತಮಿಳುನಾಡು ಕಂಬೈನ್ಡ್ ಸಿವಿಲ್ ಸರ್ವಿಸಸ್ ಎಕ್ಸಾಮ್ಗೆ ಹಾಜರಾಗಿದ್ದ. ಆದರೆ ಈತ ಸಾಮಾನ್ಯ ವರ್ಗದಲ್ಲಿ ಪರಿಗಣಿಸಲ್ಪಟ್ಟಿದ್ದರಿಂದ ಅರ್ಹತೆ ಪಡೆಯದಿರುವುದು ತಿಳಿದುಬಂದಿದೆ. ಆಗ ಈತ ರಾಜ್ಯ ಸರ್ಕಾರದ ಉದ್ಯೋಗಕ್ಕೆ ಸಂಬಂಧಿಸಿದಂತೆ ತನ್ನ ಜನ್ಮತಃ ಜಾತಿ ಮೀಸಲಾತಿ ಪರಿಗಣಿಸುವಂತೆ ಕೋರಿದ್ದ. ತನ್ನನ್ನು ಹಿಂದುಳಿದ ಮುಸ್ಲಿಂ ಎಂದು ಪರಿಗಣಿಸಬೇಕು ಎಂದು ಆತ ಕೇಳಿದ್ದ.
ತಮಿಳುನಾಡು ಸರ್ಕಾರ ಕೆಲವು ಮುಸ್ಲಿಮರನ್ನು ಅತಿ ಹಿಂದುಳಿದ ಸಮುದಾಯ ಎಂದು ಪರಿಗಣಿಸುತ್ತಿದೆ. ಆದರೆ ನ್ಯಾಯಾಲದಲ್ಲಿ ಈತನ ಅರ್ಜಿ ತಿರಸ್ಕೃತಗೊಂಡಿದ್ದು, ಮತಾಂತರಗೊಂಡರೆ ಜಾತಿ ಮೀಸಲಾತಿ ಅನ್ವಯಿಸುವುದಿಲ್ಲ ಎಂಬ ಆದೇಶ ನೀಡಲಾಗಿದೆ.
The Madras High Court recently observed that a person who has converted to another religion cannot claim the benefits of his community before conversion unless it is expressly granted by the State. Justice GR Swaminathan of the Madurai bench was hearing the plea of a candidate challenging the action of the Tamil Nadu Public Service Commission in not treating him as "Backward Class (Muslim)" but considering him as "General" category in the Combined Civil Services Examination-II (Group-II Services).
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm