ಬ್ರೇಕಿಂಗ್ ನ್ಯೂಸ್
08-12-22 01:27 pm HK News Desk ದೇಶ - ವಿದೇಶ
ಅಹ್ಮದಾಬಾದ್, ಡಿ.8: ಗುಜರಾತಿನಲ್ಲಿ ಮೋದಿ ಮ್ಯಾಜಿಕ್ ಗೆದ್ದುಕೊಂಡಿದೆ. ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಯಾರೂ ಊಹಿಸದ ರೀತಿ ಜಯಭೇರಿ ಸಾಧಿಸಿದ್ದು ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಸತತ ಏಳನೇ ಬಾರಿ ಗುಜರಾತಿನಲ್ಲಿ ಕೇಸರಿ ಪಾಳಯ ಅಧಿಕಾರದ ಗದ್ದುಗೆ ಹಿಡಿದಿದೆ.
182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ 12.30ರ ವರೆಗಿನ ಫಲಿತಾಂಶದಲ್ಲಿ ಬಿಜೆಪಿ 153 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದ್ದು ಎದುರಾಳಿ ಕಾಂಗ್ರೆಸ್, ಆಮ್ ಆದ್ಮಿ ಪಕ್ಷವನ್ನು ಹೀನಾಯವಾಗಿ ಸೋಲಿಸಿದೆ. ಕಾಂಗ್ರೆಸ್ ಕೇವಲ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, 5 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಗಳಿಸಲು ಶಕ್ತವಾಗಿದೆ.




ಕಳೆದ 27 ವರ್ಷಗಳಿಂದ ಅಧಿಕಾರದ ಗದ್ದುಗೆಯಲ್ಲಿರುವ ಬಿಜೆಪಿ ಸತತ ಏಳನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದು ಇತಿಹಾಸ ಸೃಷ್ಟಿಸಿದೆ. 182 ಸ್ಥಾನಗಳ ಪೈಕಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಎದುರಾಳಿಗಳನ್ನು ಧೂಳೀಪಟ ಮಾಡಿದೆ. ಕಾಂಗ್ರೆಸ್ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ.

ಗುಜರಾತಿನಲ್ಲಿ ಕಾಂಗ್ರೆಸ್ ತೀವ್ರ ಕುಸಿತ
2017ರಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 99 ಸ್ಥಾನಗಳಲ್ಲಿ ಜಯಗಳಿಸಿ 6ನೇ ಬಾರಿ ಅಧಿಕಾರದ ಗದ್ದುಗೆ ಏರಿತ್ತು. ಕಾಂಗ್ರೆಸ್ ಪಕ್ಷ 77 ಕ್ಷೇತ್ರಗಳಲ್ಲಿ ಜಯ ಗಳಿಸುವ ಮೂಲಕ ಪ್ರಬಲ ವಿಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 2022ರ ಚುನಾವಣೆಯಲ್ಲಿ ಮತ್ತಷ್ಟು ಬಲ ವೃದ್ಧಿಸಿಕೊಂಡಿರುವ ಬಿಜೆಪಿ, ಕಾಂಗ್ರೆಸನ್ನು ಮೂಲೆಗುಂಪು ಮಾಡಿದ್ದಲ್ಲದೆ 50 ಶೇಕಡಾ ಮತ ಗಳಿಕೆಯಿಂದ ಭಾರೀ ಮುನ್ನಡೆ ಸಾಧಿಸಿದೆ.

ಕೊನೆಕ್ಷಣದಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಜೋಡಿಯ ಚುನಾವಣೆ ಪ್ರಚಾರ ಚುನಾವಣೆ ಫಲಿತಾಂಶದ ದಿಕ್ಕನ್ನೇ ಬದಲಿಸಿದೆ. 1989ರಲ್ಲಿ ಕಾಂಗ್ರೆಸ್ 149 ಸ್ಥಾನಗಳನ್ನು ಗೆದ್ದಿದ್ದು ಈವರೆಗಿನ ಅತಿ ಹೆಚ್ಚು ಗಳಿಕೆಯ ಇತಿಹಾಸ. ಆದರೆ ಈ ಬಾರಿ ಬಿಜೆಪಿ ಕಾಂಗ್ರೆಸ್ ಪರ ಇದ್ದ ದಾಖಲೆಯನ್ನು ಅಳಿಸಿ ಹಾಕುವ ಲಕ್ಷಣ ಮೂಡಿಸಿದೆ.
The BJP leads in Gujarat has crossed 150 -- a record in Prime Minister Narendra Modi's home state, surpassing the Congress score of 149 in 1985. Back then, Madhavsinh Solanki rose the social coalition KHAM (Koli Kshatriya, Harijan, Adivasi and Muslim). Today, the Grand Old Party might be headed for its worst score ever, confined to teens by the massive BJP surge.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm