ಬ್ರೇಕಿಂಗ್ ನ್ಯೂಸ್
14-12-22 03:36 pm HK News Desk ದೇಶ - ವಿದೇಶ
ಭೋಪಾಲ್, ಡಿ.14: ಐದು ವರ್ಷಗಳ ಹಿಂದೆ ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಮುಸ್ಲಿಂ ಯುವಕನೊಬ್ಬ ಹಿಂದು ಧರ್ಮಕ್ಕೆ ಮತಾಂತರಗೊಂಡಿದ್ದಾನೆ. ಮಧ್ಯಪ್ರದೇಶದ ಮಂಡ್ ಸೌರ್ ಜಿಲ್ಲೆಯ ಕಚ್ ನಾರಾ ಗ್ರಾಮದ ನಿವಾಸಿ ಅಫ್ಸರ್ ಮನ್ಸೂರಿ ಎಂಬಾತ ಹಿಂದುವಾಗಿ ಬದಲಾಗಿದ್ದಲ್ಲದೆ, ತನ್ನ ಹೆಸರನ್ನು ಕೃಷ್ಣ ಸನಾತನಿ ಎಂದು ಬದಲಿಸಿಕೊಂಡಿದ್ದಾನೆ.
ಐದು ವರ್ಷಗಳ ಹಿಂದೆ ರಾಧಾ ಎಂಬವಳನ್ನು ದೇವಸ್ಥಾನದಲ್ಲಿ ಮದುವೆಯಾಗಿದ್ದ ಅಫ್ಸರ್, ಆನಂತರ ತನ್ನ ಕುಟುಂಬದಿಂದ ದೂರವಿದ್ದು ಪ್ರತ್ಯೇಕವಾಗಿ ವಾಸವಿದ್ದರು. ಹಿಂದು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಿದ್ದರು. ಇದೀಗ ಹಿಂದು ಹೆಸರಿನೊಂದಿಗೆ ಧರ್ಮವನ್ನು ಬದಲಿಸಿಕೊಂಡಿದ್ದಾರೆ. ಹಿಂದು ಧರ್ಮಕ್ಕೆ ಮತಾಂತರಗೊಂಡ ಪ್ರಕ್ರಿಯೆಯನ್ನು ಗಾಯತ್ರಿ ಪರಿವಾರದ ಅರ್ಚಕರೊಬ್ಬರು ನೆರವೇರಿಸಿದ್ದಾರೆ. ಗೋವಿನ ಮೂತ್ರ, ಸೆಗಣಿ, ಮೊಸರು, ಹಾಲು, ಜೇನಿನ ಅಭಿಷೇಕ ಮಾಡಿ ಮಂತ್ರ ಪಠಣಗೈದು ಹಿಂದು ಧರ್ಮಕ್ಕೆ ಸೇರಿಸಿಕೊಂಡಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ರೋಗಿಗಳ ಕೇರ್ ಟೇಕರ್ ಆಗಿ ರಾಧಾ ಕೆಲಸ ಮಾಡುತ್ತಿದ್ದರು. ಅಲ್ಲಿಗೆ ಅಫ್ಸರ್ ಮನ್ಸೂರಿ ಬೇರೆ ಬೇರೆ ಕಡೆಯಿಂದ ರೋಗಿಗಳನ್ನು ಒಯ್ದು ತಲುಪಿಸುತ್ತಿದ್ದರು. ಈ ವೇಳೆ, ರಾಧಾ ಪರಿಚಯವಾಗಿ ಪ್ರೀತಿ ಬೆಳೆದು ಮದುವೆಯಾಗಿದ್ದರು. ಆನಂತರ, ರಾಧಾಳನ್ನು ಜೊತೆಗೆ ಕರೆದುಕೊಂಡು ಬಂದು ಮಧ್ಯಪ್ರದೇಶದ ಮಂಡ್ ಸೌರ್ ನಲ್ಲಿಯೇ ವಾಸ ಮಾಡಿಕೊಂಡಿದ್ದರು. ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಬಳಿಕ ಮುಸ್ಲಿಂ ಆಗಿ ಮತಾಂತರಿಸುವ ಬಗ್ಗೆ ದೇಶದ ಎಲ್ಲೆಡೆ ಆರೋಪ ಕೇಳಿಬರುತ್ತಿರುವ ಸಂದರ್ಭದಲ್ಲೇ ಇಲ್ಲೊಬ್ಬ ತನ್ನ ಪ್ರೀತಿಗಾಗಿ ಪತ್ನಿಯ ಧರ್ಮಕ್ಕೇ ಮತಾಂತರಗೊಂಡಿದ್ದಾನೆ.
A Muslim man, who married a Hindu woman five years ago, has converted to Hindusim an changed his name to 'Krishna Sanatani'. The incident was reported from Madhya Pradesh's Mandsaur district. The Muslim man had married the woman from the Hindu community at a temple after falling in love with her.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm