ಬ್ರೇಕಿಂಗ್ ನ್ಯೂಸ್
15-12-22 10:26 pm HK News Desk ದೇಶ - ವಿದೇಶ
ನವದೆಹಲಿ, ಡಿ.15: ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದಲ್ಲಿ ಫಾರೆನ್ಸಿಕ್ ಸೈನ್ಸ್ ಲ್ಯಾಬ್ ದೆಹಲಿ ಪೊಲೀಸರಿಗೆ ವರದಿ ನೀಡಿದೆ. ಮೆಹ್ರೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಪತ್ತೆ ಮಾಡಿದ್ದ ಶ್ರದ್ಧಾ ವಾಲ್ಕರ್ ನದ್ದು ಎನ್ನಲಾದ ಎಲುಬು ತುಂಡುಗಳನ್ನು ಆಕೆಯ ತಂದೆಯ ಡಿಎನ್ಎ ಜೊತೆಗೆ ಪರೀಕ್ಷೆಗೆ ಒಳಪಡಿಸಿದ್ದು, ಪಾಸಿಟಿವ್ ತೋರಿಸಿದೆ. ಅಲ್ಲದೆ, ಪಾಲಿಗ್ರಾಫ್ ಪರೀಕ್ಷೆಯಲ್ಲಿ ಆರೋಪಿ ಅಫ್ತಾಬ್ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂಬುದಾಗಿಯೂ ವರದಿ ನೀಡಿದೆ.
ಕಳೆದ ನವೆಂಬರ್ 12ರಂದು ಕೃತ್ಯ ಬೆಳಕಿಗೆ ಬಂದ ಬಳಿಕ ಶ್ರದ್ಧಾ ವಾಲ್ಕರ್ ದೇಹವನ್ನು 35 ಪೀಸ್ ಮಾಡಿ ಹಲವು ಕಡೆ ಎಸೆದಿದ್ದಾಗಿ ಆರೋಪಿ ನೀಡಿದ್ದ ಹೇಳಿಕೆ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇದರ ಬೆನ್ನಲ್ಲೇ ಪೊಲೀಸರು ಆತನನ್ನು ವಿವಿಧ ಕಡೆಗಳಿಗೆ ಒಯ್ದು ಆಕೆಯ ದೇಹದ ಭಾಗಗಳಿಗಾಗಿ ಹುಡುಕಾಟ ನಡೆಸಿದ್ದರು. ಮೆಹ್ರೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡಿನ ಪ್ರದೇಶದಲ್ಲಿ ಕೆಲವು ಎಲುಬು ತುಂಡುಗಳು ಸಿಕ್ಕಿದ್ದವು. ದೇಹದ ಭಾಗಗಳನ್ನು ತುಂಡರಿಸಿ, ಫ್ರಿಡ್ಜ್ ನಲ್ಲಿಟ್ಟು ಒಂದೊಂದೇ ತುಂಡುಗಳನ್ನು ರಾತ್ರಿ ವೇಳೆ ಹೊರಗೊಯ್ದು ಎಸೆದು ಬರುತ್ತಿದ್ದ ಎನ್ನಲಾಗಿತ್ತು.
ಮೇ 18ರಂದು ಕೊಲೆ ಕೃತ್ಯ ನಡೆದು ಎರಡು ವಾರ ಕಾಲ ಶವದ ತುಂಡುಗಳನ್ನು ತನ್ನದೇ ಮನೆಯಲ್ಲಿಟ್ಟು ಹೊರಗೆ ಬಿಸಾಕಿ ವಿಲೇವಾರಿ ಮಾಡಿದ್ದರಿಂದ ಶವದ ಪತ್ತೆ ಸಾಧ್ಯವಾಗಿರಲಿಲ್ಲ. ಆದರೆ ಕೃತ್ಯ ನಡೆದಿದ್ದ ಮನೆಯಲ್ಲಿ ರಕ್ತದ ಕಲೆಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದಲ್ಲದೆ, ವೈಜ್ಞಾನಿಕ ಸಾಕ್ಷ್ಯಗಳ ಕಲೆಹಾಕಿದ್ದರು. ಈ ನಡುವೆ, ವಿವಿಧ ಕಡೆಗಳಲ್ಲಿ ದೊರೆತಿದ್ದ 13 ಎಲುಬು ತುಂಡುಗಳನ್ನು ಆಕೆಯ ತಂದೆಯ ಡಿಎನ್ಎ ಜೊತೆಗೆ ತಾಳೆ ಹಾಕಿ ನೋಡಿದ್ದಾರೆ. ಡಿಎನ್ಎ ಟೆಸ್ಟ್ ನಲ್ಲಿ ಅದು ಆಕೆಯದ್ದೇ ಎಲುಬು ಎನ್ನುವುದು ಕಂಡುಬಂದಿದೆ.
ಈ ನಡುವೆ, ಆರೋಪಿಯನ್ನು ಪಾಲಿಗ್ರಾಫ್ ಮತ್ತು ನಾರ್ಕೋ ಅನಾಲಿಸಿಸ್ ಪರೀಕ್ಷೆಗೂ ಫಾರೆನ್ಸಿಕ್ ತಜ್ಞರು ಒಳಪಡಿಸಿದ್ದಾರೆ. ಅದರಲ್ಲಿ ಕೃತ್ಯವನ್ನು ತಾನೇ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆಂದು ವರದಿ ನೀಡಿದ್ದಾರೆ. ಆದರೆ ಕೃತ್ಯದ ಬಗ್ಗೆ ಯಾವುದೇ ಪಶ್ಚಾತ್ತಾಪ ಭಾವನೆ ಆತನಿಗೆ ಇಲ್ಲವೆಂದು ವರದಿಯಲ್ಲಿ ಹೇಳಿದ್ದಾರೆ.
Few bones that recovered from Delhi’s Mehrauli and Gurugram forest matched the DNA of Shraddha Walkar’s father, news agency ANI reported quoting sources. The forensic lab matched the blood clot and bones to Shraddha’s father Vikas Walkar’s DNA sample. Some of the bone and blood samples recovered in the tiles of the flat rented by Shraddha and her live-in partner, accused Aaftab Poonawala, are also being tested. The DNA test report of the victim’s body parts has not been received by police yet.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm