ಬ್ರೇಕಿಂಗ್ ನ್ಯೂಸ್
17-12-22 04:21 pm HK News Desk ದೇಶ - ವಿದೇಶ
ಹೈದರಾಬಾದ್, ಡಿ.17 : ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಢನಿದ್ರೆಯಲ್ಲಿದ್ದ ಕುಟುಂಬವೊಂದರ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ.
ಗ್ರಾಮ ಕಂದಾಯ ಸಹಾಯಕ ಮಸುಶಿವಯ್ಯ (50) ಅವರ ಪತ್ನಿ ಪದ್ಮ (45), ಪದ್ಮ ಅವರ ಅಕ್ಕನ ಮಗಳು ಮೌನಿಕಾ (23) ಆಕೆಯ ಇಬ್ಬರು ಹೆಣ್ಣು ಮಕ್ಕಳಾದ ಹಿಮಬಿಂಧು, ಸ್ವೀಟಿ, ಸಂಬಂಧಿಕರಾದ ಶಾಂತಯ್ಯ ಸಜೀವಂತ ದಹನವಾಗಿದ್ದಾರೆ.
![]()
ರಾಮಕೃಷ್ಣಪುರ ಪೊಲೀಸ್ ಠಾಣೆ ವ್ಯಾಪ್ತಿಯ ವೆಂಕಟಾಪುರ ಗ್ರಾಮದಲ್ಲಿ ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮನೆ ಬೆಂಕಿಯ ಕೆನ್ನಾಲಿಗೆಗಳಿಂದ ಉರಿಯುತ್ತಿರುವುದನ್ನು ಅಕ್ಕಪಕ್ಕದವರು ಗಮನಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿ ಶಾಮಕ ದಳ ಸ್ಥಳಕ್ಕಾಗಮಿಸಿದೆ. ಆ ವೇಳೆಗಾಗಲೇ ಇಡೀ ಮನೆ ಸಂಪೂರ್ಣ ಭಸ್ಮವಾಗಿದೆ. ಬೆಂಕಿ ನಂದಿಸಿ ಪರಿಶೀಲನೆ ನಡೆಸಿದಾಗ ಆರು ಮಂದಿ ಸುಟ್ಟು ಕರಕಲಾಗಿರುವುದು ಪತ್ತೆಯಾಗಿದೆ.

ಆ ಮನೆಯಲ್ಲಿ ಶಿವಯ್ಯ ಮತ್ತು ಪದ್ಮ ವಾಸವಿದ್ದರು. ಕಳೆದೆರಡು ದಿನಗಳ ಹಿಂದೆ ಮೌನಿಕಾ, ಆಕೆಯ ಮಕ್ಕಳು ಮತ್ತು ಸಂಬಂಧಿಕರು ಆಗಮಿಸಿದ್ದರು. ಬೆಂಕಿ ಹತ್ತಿದಾಗ ಎಲ್ಲರೂ ಮನೆಯಲ್ಲಿದ್ದು ಮೃತಪಟ್ಟಿದ್ದಾರೆ ಎಂದು ಮಂಚೇರಿಯಲ್ ವಿಭಾಗದ ಎಸಿಪಿ ತಿರುಪತಿರೆಡ್ಡಿ ತಿಳಿಸಿದ್ದಾರೆ.

ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ. ಬೆಂಕಿಗೆ ಕಾರಣವಾಗಿರುವ ಅಂಶಗಳು ಅನುಮಾನಸ್ಪದವಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ಅಖಿಲ್ ಮಹಾಜನ್ ತಿಳಿಸಿದ್ದಾರೆ.

ಬೆಂಕಿಯಿಂದ ಮನೆ ಹೊತ್ತಿ ಉರಿಯುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ದೃಶ್ಯ ಭೀಕರವಾಗಿದ್ದು, ಎದೆ ನಡುಗಿಸುವಂತಿದೆ. ಬಹುತೇಕ ಮರದ ವಸ್ತುಗಳನ್ನು ಬಳಸಿ ನಿರ್ಮಿಸಿದ್ದರಿಂದ ಮನೆ ಬೆಂಕಿಯಿಂದ ಬೂದಿಯಾಗಿ ಹೋಗಿದೆ.
Six members of a family, including two children, were charred to death when fire broke out at their house in Gudipally village in Mandamarri mandal of Mancherial district in the small hours today. Shivaiah, the owner of the house was among those who died in the blaze that erupted in his tiled-roof house at around 1.15 a.m., sources said.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm