ಬ್ರೇಕಿಂಗ್ ನ್ಯೂಸ್
17-12-22 04:21 pm HK News Desk ದೇಶ - ವಿದೇಶ
ಹೈದರಾಬಾದ್, ಡಿ.17 : ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಢನಿದ್ರೆಯಲ್ಲಿದ್ದ ಕುಟುಂಬವೊಂದರ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ.
ಗ್ರಾಮ ಕಂದಾಯ ಸಹಾಯಕ ಮಸುಶಿವಯ್ಯ (50) ಅವರ ಪತ್ನಿ ಪದ್ಮ (45), ಪದ್ಮ ಅವರ ಅಕ್ಕನ ಮಗಳು ಮೌನಿಕಾ (23) ಆಕೆಯ ಇಬ್ಬರು ಹೆಣ್ಣು ಮಕ್ಕಳಾದ ಹಿಮಬಿಂಧು, ಸ್ವೀಟಿ, ಸಂಬಂಧಿಕರಾದ ಶಾಂತಯ್ಯ ಸಜೀವಂತ ದಹನವಾಗಿದ್ದಾರೆ.
![]()
ರಾಮಕೃಷ್ಣಪುರ ಪೊಲೀಸ್ ಠಾಣೆ ವ್ಯಾಪ್ತಿಯ ವೆಂಕಟಾಪುರ ಗ್ರಾಮದಲ್ಲಿ ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮನೆ ಬೆಂಕಿಯ ಕೆನ್ನಾಲಿಗೆಗಳಿಂದ ಉರಿಯುತ್ತಿರುವುದನ್ನು ಅಕ್ಕಪಕ್ಕದವರು ಗಮನಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿ ಶಾಮಕ ದಳ ಸ್ಥಳಕ್ಕಾಗಮಿಸಿದೆ. ಆ ವೇಳೆಗಾಗಲೇ ಇಡೀ ಮನೆ ಸಂಪೂರ್ಣ ಭಸ್ಮವಾಗಿದೆ. ಬೆಂಕಿ ನಂದಿಸಿ ಪರಿಶೀಲನೆ ನಡೆಸಿದಾಗ ಆರು ಮಂದಿ ಸುಟ್ಟು ಕರಕಲಾಗಿರುವುದು ಪತ್ತೆಯಾಗಿದೆ.

ಆ ಮನೆಯಲ್ಲಿ ಶಿವಯ್ಯ ಮತ್ತು ಪದ್ಮ ವಾಸವಿದ್ದರು. ಕಳೆದೆರಡು ದಿನಗಳ ಹಿಂದೆ ಮೌನಿಕಾ, ಆಕೆಯ ಮಕ್ಕಳು ಮತ್ತು ಸಂಬಂಧಿಕರು ಆಗಮಿಸಿದ್ದರು. ಬೆಂಕಿ ಹತ್ತಿದಾಗ ಎಲ್ಲರೂ ಮನೆಯಲ್ಲಿದ್ದು ಮೃತಪಟ್ಟಿದ್ದಾರೆ ಎಂದು ಮಂಚೇರಿಯಲ್ ವಿಭಾಗದ ಎಸಿಪಿ ತಿರುಪತಿರೆಡ್ಡಿ ತಿಳಿಸಿದ್ದಾರೆ.

ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ. ಬೆಂಕಿಗೆ ಕಾರಣವಾಗಿರುವ ಅಂಶಗಳು ಅನುಮಾನಸ್ಪದವಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ಅಖಿಲ್ ಮಹಾಜನ್ ತಿಳಿಸಿದ್ದಾರೆ.

ಬೆಂಕಿಯಿಂದ ಮನೆ ಹೊತ್ತಿ ಉರಿಯುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ದೃಶ್ಯ ಭೀಕರವಾಗಿದ್ದು, ಎದೆ ನಡುಗಿಸುವಂತಿದೆ. ಬಹುತೇಕ ಮರದ ವಸ್ತುಗಳನ್ನು ಬಳಸಿ ನಿರ್ಮಿಸಿದ್ದರಿಂದ ಮನೆ ಬೆಂಕಿಯಿಂದ ಬೂದಿಯಾಗಿ ಹೋಗಿದೆ.
Six members of a family, including two children, were charred to death when fire broke out at their house in Gudipally village in Mandamarri mandal of Mancherial district in the small hours today. Shivaiah, the owner of the house was among those who died in the blaze that erupted in his tiled-roof house at around 1.15 a.m., sources said.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm