ಬ್ರೇಕಿಂಗ್ ನ್ಯೂಸ್
20-12-22 03:29 pm HK News Desk ದೇಶ - ವಿದೇಶ
ಜೈಪುರ, ಡಿ.20: ಬಡತನ ರೇಖೆಗಿಂತ ಕೆಳಗಿರುವ ಮತ್ತು ಕೇಂದ್ರ ಸರಕಾರದ ಉಜ್ವಲ ಯೋಜನೆಯಡಿ ಒಳಗೊಂಡಿರುವ ಎಲ್ಪಿಜಿ ಗ್ಯಾಸ್ ಗ್ರಾಹಕರಿಗೆ ರಾಜಸ್ಥಾನ ಸರಕಾರ ಬಿಗ್ ಆಫರ್ ಘೋಷಿಸಿದೆ. ವರ್ಷದಲ್ಲಿ 12 ಸಿಲಿಂಡರ್ ಗಳನ್ನು ತಲಾ 500 ರೂ.ಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ.
ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ರಾಜಸ್ಥಾನದ ಕಾಂಗ್ರೆಸ್ ಸರಕಾರ, ಚುನಾವಣೆ ದೃಷ್ಟಿಯಲ್ಲಿರಿಸಿ ಬೆಲೆಯೇರಿಕೆಯಿಂದ ತತ್ತರಿಸಿರುವ ಜನರಿಗೆ ಸಿಲಿಂಡರ್ ದರವನ್ನು ಇಳಿಸುವ ಘೋಷಣೆ ಮಾಡಿದೆ. ನಾನು ಮುಂದಿನ ತಿಂಗಳ ಬಜೆಟ್ ಗೆ ಸಿದ್ಧತೆ ನಡೆಸುತ್ತಿದ್ದೇನೆ. ಮೋದಿಯವರು ಉಜ್ವಲ ಯೋಜನೆಯಡಿ ಬಡವರಿಗೆ ಸಿಲಿಂಡರ್ ಗಳನ್ನು ನೀಡಿದ್ದಾರೆ. ಆದರೆ ಅವು ಈಗ ಖಾಲಿಯಾಗಿವೆ. ಯಾಕಂದ್ರೆ, ಸಿಲಿಂಡರ್ ಬೆಲೆ ಈಗ 400 ರೂ.ನಿಂದ 1040 ರೂ.ಗೆ ಏರಿಕೆಯಾಗಿದೆ. ಇದಕ್ಕಾಗಿ ನಾನು ಭರವಸೆ ನೀಡುತ್ತಿರೋದು ಏನಂದ್ರೆ, ಬಡವರಿಗೆ ಕೇವಲ 500 ರೂ.ನಲ್ಲಿಯೇ ಸಿಲಿಂಡರ್ ಗಳನ್ನು ನೀಡಲಿದ್ದೇನೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಉಪಸ್ಥಿತಿಯಲ್ಲೇ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದ್ದಾರೆ.

ಮುಂದಿನ ವರ್ಷ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಎರಡನೇ ಬಾರಿಗೆ ಕಾಂಗ್ರೆಸ್ ಅಧಿಕಾರಕ್ಕೇರಲು ಗೆಹ್ಲೋಟ್ ಹರಸಾಹಸ ನಡೆಸುತ್ತಿದ್ದಾರೆ. ಸಚಿನ್ ಪೈಲಟ್ ಬಳಗದ ಜೊತೆಗಿನ ಒಳಜಗಳದ ನಡುವಲ್ಲೇ ಮುಂದಿನ ಬಾರಿಯೂ ತಾನೇ ಮುಖ್ಯಮಂತ್ರಿಯಾಗಲು ಗೆಹ್ಲೋಟ್ ಕಸರತ್ತು ನಡೆಸಿದ್ದಾರೆ. ರಾಹುಲ್ ಗಾಂಧಿಯ ಭಾರತ್ ಜೋಡೊ ಯಾತ್ರೆ ರಾಜಸ್ಥಾನ ಪ್ರವೇಶ ಮಾಡಿದ ಈ ತಿಂಗಳ ಆರಂಭದಲ್ಲಿಯೇ ಅಲ್ಲಿನ ಒಳ ಜಗಳ ಹೊರಗೆ ಬಂದಿತ್ತು.

ಆದರೆ ಈ ನಡುವೆ, ರಾಹುಲ್ ಗಾಂಧಿ ಅಲ್ವಾರ್ ಜಿಲ್ಲೆಯಲ್ಲಿ ಯಾತ್ರೆಯ ನಡುವಲ್ಲೇ ರಾಜಸ್ಥಾನ ಸರಕಾರದ ಸಾಧನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ರಾಜ್ಯ ಸರಕಾರ ಆರಂಭಿಸಿರುವ 1700 ಇಂಗ್ಲಿಷ್ ಮೀಡಿಯಂ ಶಾಲೆಗಳನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.
The Congress government in Rajasthan will provide 12 LPG cylinders a year at ₹500 each to poor families enrolled under the Pradhan Mantri Ujjwala Yojana from April 1, Chief Minister Ashok Gehlot said on Monday. Mr. Gehlot made the announcement at a public meeting organised during Congress leader Rahul Gandhi’s Bharat Jodo Yatra at Mala Kheda village in Alwar district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm