ಬ್ರೇಕಿಂಗ್ ನ್ಯೂಸ್
20-12-22 03:29 pm HK News Desk ದೇಶ - ವಿದೇಶ
ಜೈಪುರ, ಡಿ.20: ಬಡತನ ರೇಖೆಗಿಂತ ಕೆಳಗಿರುವ ಮತ್ತು ಕೇಂದ್ರ ಸರಕಾರದ ಉಜ್ವಲ ಯೋಜನೆಯಡಿ ಒಳಗೊಂಡಿರುವ ಎಲ್ಪಿಜಿ ಗ್ಯಾಸ್ ಗ್ರಾಹಕರಿಗೆ ರಾಜಸ್ಥಾನ ಸರಕಾರ ಬಿಗ್ ಆಫರ್ ಘೋಷಿಸಿದೆ. ವರ್ಷದಲ್ಲಿ 12 ಸಿಲಿಂಡರ್ ಗಳನ್ನು ತಲಾ 500 ರೂ.ಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ.
ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ರಾಜಸ್ಥಾನದ ಕಾಂಗ್ರೆಸ್ ಸರಕಾರ, ಚುನಾವಣೆ ದೃಷ್ಟಿಯಲ್ಲಿರಿಸಿ ಬೆಲೆಯೇರಿಕೆಯಿಂದ ತತ್ತರಿಸಿರುವ ಜನರಿಗೆ ಸಿಲಿಂಡರ್ ದರವನ್ನು ಇಳಿಸುವ ಘೋಷಣೆ ಮಾಡಿದೆ. ನಾನು ಮುಂದಿನ ತಿಂಗಳ ಬಜೆಟ್ ಗೆ ಸಿದ್ಧತೆ ನಡೆಸುತ್ತಿದ್ದೇನೆ. ಮೋದಿಯವರು ಉಜ್ವಲ ಯೋಜನೆಯಡಿ ಬಡವರಿಗೆ ಸಿಲಿಂಡರ್ ಗಳನ್ನು ನೀಡಿದ್ದಾರೆ. ಆದರೆ ಅವು ಈಗ ಖಾಲಿಯಾಗಿವೆ. ಯಾಕಂದ್ರೆ, ಸಿಲಿಂಡರ್ ಬೆಲೆ ಈಗ 400 ರೂ.ನಿಂದ 1040 ರೂ.ಗೆ ಏರಿಕೆಯಾಗಿದೆ. ಇದಕ್ಕಾಗಿ ನಾನು ಭರವಸೆ ನೀಡುತ್ತಿರೋದು ಏನಂದ್ರೆ, ಬಡವರಿಗೆ ಕೇವಲ 500 ರೂ.ನಲ್ಲಿಯೇ ಸಿಲಿಂಡರ್ ಗಳನ್ನು ನೀಡಲಿದ್ದೇನೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಉಪಸ್ಥಿತಿಯಲ್ಲೇ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದ್ದಾರೆ.

ಮುಂದಿನ ವರ್ಷ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಎರಡನೇ ಬಾರಿಗೆ ಕಾಂಗ್ರೆಸ್ ಅಧಿಕಾರಕ್ಕೇರಲು ಗೆಹ್ಲೋಟ್ ಹರಸಾಹಸ ನಡೆಸುತ್ತಿದ್ದಾರೆ. ಸಚಿನ್ ಪೈಲಟ್ ಬಳಗದ ಜೊತೆಗಿನ ಒಳಜಗಳದ ನಡುವಲ್ಲೇ ಮುಂದಿನ ಬಾರಿಯೂ ತಾನೇ ಮುಖ್ಯಮಂತ್ರಿಯಾಗಲು ಗೆಹ್ಲೋಟ್ ಕಸರತ್ತು ನಡೆಸಿದ್ದಾರೆ. ರಾಹುಲ್ ಗಾಂಧಿಯ ಭಾರತ್ ಜೋಡೊ ಯಾತ್ರೆ ರಾಜಸ್ಥಾನ ಪ್ರವೇಶ ಮಾಡಿದ ಈ ತಿಂಗಳ ಆರಂಭದಲ್ಲಿಯೇ ಅಲ್ಲಿನ ಒಳ ಜಗಳ ಹೊರಗೆ ಬಂದಿತ್ತು.

ಆದರೆ ಈ ನಡುವೆ, ರಾಹುಲ್ ಗಾಂಧಿ ಅಲ್ವಾರ್ ಜಿಲ್ಲೆಯಲ್ಲಿ ಯಾತ್ರೆಯ ನಡುವಲ್ಲೇ ರಾಜಸ್ಥಾನ ಸರಕಾರದ ಸಾಧನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ರಾಜ್ಯ ಸರಕಾರ ಆರಂಭಿಸಿರುವ 1700 ಇಂಗ್ಲಿಷ್ ಮೀಡಿಯಂ ಶಾಲೆಗಳನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.
The Congress government in Rajasthan will provide 12 LPG cylinders a year at ₹500 each to poor families enrolled under the Pradhan Mantri Ujjwala Yojana from April 1, Chief Minister Ashok Gehlot said on Monday. Mr. Gehlot made the announcement at a public meeting organised during Congress leader Rahul Gandhi’s Bharat Jodo Yatra at Mala Kheda village in Alwar district.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm