ಬ್ರೇಕಿಂಗ್ ನ್ಯೂಸ್
20-12-22 03:29 pm HK News Desk ದೇಶ - ವಿದೇಶ
ಜೈಪುರ, ಡಿ.20: ಬಡತನ ರೇಖೆಗಿಂತ ಕೆಳಗಿರುವ ಮತ್ತು ಕೇಂದ್ರ ಸರಕಾರದ ಉಜ್ವಲ ಯೋಜನೆಯಡಿ ಒಳಗೊಂಡಿರುವ ಎಲ್ಪಿಜಿ ಗ್ಯಾಸ್ ಗ್ರಾಹಕರಿಗೆ ರಾಜಸ್ಥಾನ ಸರಕಾರ ಬಿಗ್ ಆಫರ್ ಘೋಷಿಸಿದೆ. ವರ್ಷದಲ್ಲಿ 12 ಸಿಲಿಂಡರ್ ಗಳನ್ನು ತಲಾ 500 ರೂ.ಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ.
ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ರಾಜಸ್ಥಾನದ ಕಾಂಗ್ರೆಸ್ ಸರಕಾರ, ಚುನಾವಣೆ ದೃಷ್ಟಿಯಲ್ಲಿರಿಸಿ ಬೆಲೆಯೇರಿಕೆಯಿಂದ ತತ್ತರಿಸಿರುವ ಜನರಿಗೆ ಸಿಲಿಂಡರ್ ದರವನ್ನು ಇಳಿಸುವ ಘೋಷಣೆ ಮಾಡಿದೆ. ನಾನು ಮುಂದಿನ ತಿಂಗಳ ಬಜೆಟ್ ಗೆ ಸಿದ್ಧತೆ ನಡೆಸುತ್ತಿದ್ದೇನೆ. ಮೋದಿಯವರು ಉಜ್ವಲ ಯೋಜನೆಯಡಿ ಬಡವರಿಗೆ ಸಿಲಿಂಡರ್ ಗಳನ್ನು ನೀಡಿದ್ದಾರೆ. ಆದರೆ ಅವು ಈಗ ಖಾಲಿಯಾಗಿವೆ. ಯಾಕಂದ್ರೆ, ಸಿಲಿಂಡರ್ ಬೆಲೆ ಈಗ 400 ರೂ.ನಿಂದ 1040 ರೂ.ಗೆ ಏರಿಕೆಯಾಗಿದೆ. ಇದಕ್ಕಾಗಿ ನಾನು ಭರವಸೆ ನೀಡುತ್ತಿರೋದು ಏನಂದ್ರೆ, ಬಡವರಿಗೆ ಕೇವಲ 500 ರೂ.ನಲ್ಲಿಯೇ ಸಿಲಿಂಡರ್ ಗಳನ್ನು ನೀಡಲಿದ್ದೇನೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಉಪಸ್ಥಿತಿಯಲ್ಲೇ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದ್ದಾರೆ.

ಮುಂದಿನ ವರ್ಷ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಎರಡನೇ ಬಾರಿಗೆ ಕಾಂಗ್ರೆಸ್ ಅಧಿಕಾರಕ್ಕೇರಲು ಗೆಹ್ಲೋಟ್ ಹರಸಾಹಸ ನಡೆಸುತ್ತಿದ್ದಾರೆ. ಸಚಿನ್ ಪೈಲಟ್ ಬಳಗದ ಜೊತೆಗಿನ ಒಳಜಗಳದ ನಡುವಲ್ಲೇ ಮುಂದಿನ ಬಾರಿಯೂ ತಾನೇ ಮುಖ್ಯಮಂತ್ರಿಯಾಗಲು ಗೆಹ್ಲೋಟ್ ಕಸರತ್ತು ನಡೆಸಿದ್ದಾರೆ. ರಾಹುಲ್ ಗಾಂಧಿಯ ಭಾರತ್ ಜೋಡೊ ಯಾತ್ರೆ ರಾಜಸ್ಥಾನ ಪ್ರವೇಶ ಮಾಡಿದ ಈ ತಿಂಗಳ ಆರಂಭದಲ್ಲಿಯೇ ಅಲ್ಲಿನ ಒಳ ಜಗಳ ಹೊರಗೆ ಬಂದಿತ್ತು.

ಆದರೆ ಈ ನಡುವೆ, ರಾಹುಲ್ ಗಾಂಧಿ ಅಲ್ವಾರ್ ಜಿಲ್ಲೆಯಲ್ಲಿ ಯಾತ್ರೆಯ ನಡುವಲ್ಲೇ ರಾಜಸ್ಥಾನ ಸರಕಾರದ ಸಾಧನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ರಾಜ್ಯ ಸರಕಾರ ಆರಂಭಿಸಿರುವ 1700 ಇಂಗ್ಲಿಷ್ ಮೀಡಿಯಂ ಶಾಲೆಗಳನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.
The Congress government in Rajasthan will provide 12 LPG cylinders a year at ₹500 each to poor families enrolled under the Pradhan Mantri Ujjwala Yojana from April 1, Chief Minister Ashok Gehlot said on Monday. Mr. Gehlot made the announcement at a public meeting organised during Congress leader Rahul Gandhi’s Bharat Jodo Yatra at Mala Kheda village in Alwar district.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm