ಬ್ರೇಕಿಂಗ್ ನ್ಯೂಸ್
20-12-22 09:48 pm HK News Desk ದೇಶ - ವಿದೇಶ
ಪಾಟ್ನಾ, ಡಿ.20 : ಕೋಟ್ಯಧಿಪತಿಗಳ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಐಟಿ ನೋಟಿಸ್ ನೀಡುವುದು ಹೊಸದೇನಲ್ಲ. ಆದರೆ ಇಲ್ಲೊಂದು ಕಡೆ ದಿನಗೂಲಿ ಕೆಲಸ ಮಾಡುವಾತನ ಮನೆಗೆ ಐಟಿ ಅಧಿಕಾರಿಗಳು ತೆರಳಿದ್ದಲ್ಲದೆ, 14 ಕೋಟಿ ರೂ. ಆದಾಯ ತೆರಿಗೆ ಬಾಕಿಯಿದೆ ಎಂದು ನೋಟಿಸ್ ನೀಡಿದ್ದಾರೆ.
ಬಿಹಾರದ ರೋಹ್ಟಸ್ ಜಿಲ್ಲೆಯ ಕರ್ಗರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ, ದಿನಗೂಲಿ ಕೆಲಸ ಮಾಡುತ್ತಿರುವ ಮನೋಜ್ ಯಾದವ್ ಮನೆಗೆ ಸೋಮವಾರ ಬಂದಿದ್ದ ಆದಾಯ ತೆರಿಗೆ ಅಧಿಕಾರಿಗಳು, 14 ಕೋಟಿ ರೂ. ರಿಟರ್ನ್ಸ್ ಬಾಕಿ ಇದೆ ಎಂದು ನೋಟಿಸ್ ನೀಡಿದ್ದಾರೆ. ಅಧಿಕಾರಿಗಳ ನೋಟಿಸ್ ನೋಡಿ, ಮನೋಜ್ ಯಾದವ್ ಕುಟುಂಬಸ್ಥರು ಅಚ್ಚರಿಗೊಂಡಿದ್ದಾರೆ. ನಮ್ಮಲ್ಲಿರುವ ಎಲ್ಲ ಆಸ್ತಿ ಮಾರಿದರೂ 14 ಕೋಟಿ ರೂ. ಆಗುವುದಿಲ್ಲ ಎಂದು ಮನೋಜ್ ಯಾದವ್ ಬೇಡಿಕೊಂಡರೂ ಐಟಿ ಅಧಿಕಾರಿಗಳು ನಂಬಲಿಲ್ಲ. ಬ್ಯಾಂಕ್ ದಾಖಲೆಗಳ ಪ್ರಕಾರ ಮನೋಜ್ ಹೆಸರಲ್ಲಿ ಕಂಪನಿಗಳು ನಡೆಯುತ್ತಿದ್ದು, ಅದರ ಪ್ರಕಾರ 14 ಕೋಟಿ ರೂ. ತೆರಿಗೆ ಬಾಕಿ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮನೋಜ್ ಈ ಮೊದಲು ದೆಹಲಿ, ಹರಿಯಾಣ ಹಾಗೂ ಪಂಜಾಬ್ ನಲ್ಲಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿದ್ದು, ಕೋವಿಡ್ ಲಾಕ್ಡೌನ್ ನಂತರ 2020ರಲ್ಲಿ ಬಿಹಾರಕ್ಕೆ ಮರಳಿ ದಿನಗೂಲಿ ನಡೆಸಿ ಜೀವನ ನಡೆಸುತ್ತಿದ್ದಾನೆ. ತಾನು ಹಿಂದೆ ಕೆಲಸ ಮಾಡಿದ್ದ ಕಂಪನಿಗಳವರು ನನ್ನ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ, ಕೆಲಸಕ್ಕೆ ಸೇರುವ ಸಮಯದಲ್ಲಿ ಅವರು ನನ್ನ ಪಾನ್ ಮತ್ತು ಆಧಾರ್ ಕಾರ್ಡ್ ಪ್ರತಿಗಳನ್ನು ಪಡೆದಿದ್ದರು ಎಂಬುದಾಗಿ ಮನೋಜ್ ಹೇಳಿದ್ದಾರೆ.
A daily wage labourer living in Bihar’s Rohtas district has received a notice from the Income-Tax department asking him to pay Rs 14 crore in returns. One Manoj Yadav, a labourer and resident of Kargahar village, has been served a notice seeking payment of Rs14 crore in income tax. According to the officials, his bank records showed transactions of crores of rupees being done which makes him liable for paying the income tax.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm