ಬ್ರೇಕಿಂಗ್ ನ್ಯೂಸ್
21-12-22 03:44 pm HK News Desk ದೇಶ - ವಿದೇಶ
ನವದೆಹಲಿ, ಡಿ.21: ಶಾರುಖ್ ಖಾನ್- ದೀಪಿಕಾ ಪಡುಕೋಣೆ ಪಠಾಣ್ ಚಿತ್ರದಲ್ಲಿ ಕೇಸರಿ ಬಿಕಿನಿ ಧರಿಸಿ ಅಭಿನಯಿಸಿದ್ದಕ್ಕೆ ಭಾರೀ ವಿರೋಧ ಕೇಳಿಬರುತ್ತಿರುವ ನಡುವೆಯೇ ಅಯೋಧ್ಯೆಯ ಸ್ವಾಮೀಜಿ ಪರಮಹಂಸ ಆಚಾರ್ಯ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಾರುಖ್ ಖಾನ್ ಎದುರಿಗೆ ಸಿಕ್ಕರೆ ಜೀವಂತ ಸುಟ್ಟು ಹಾಕುತ್ತೇನೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಚಿತ್ರದ ಬೇಷಾರಮ್ ರಂಗ್ ಎನ್ನುವ ಹಾಡನ್ನು ರಿಲೀಸ್ ಮಾಡಲಾಗಿತ್ತು. ಅದರಲ್ಲಿ ದೀಪಿಕಾ ಕೇಸರಿ ಬಿಕಿನಿ ತೊಟ್ಟು ಅಶ್ಲೀಲವಾಗಿ ನರ್ತಿಸಿದ್ದರೆ, ಶಾರುಖ್ ಖಾನ್ ಹಸಿರು ಬಟ್ಟೆ ತೊಟ್ಟು ಸಾಥ್ ಕೊಟ್ಟಿದ್ದರು. ಈ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದ್ದು ಹಲವು ಕಡೆಗಳಲ್ಲಿ ಪ್ರತಿಭಟನೆ ವ್ಯಕ್ತವಾಗಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶದಲ್ಲಿ ಕೆಲವು ಸಚಿವರು ಕೂಡ ವಿರೋಧ ವ್ಯಕ್ತಪಡಿಸಿದ್ದರು.
ಇದೀಗ ಅಯೋಧ್ಯೆ ಸ್ವಾಮೀಜಿ ಪರಮಹಂಸ ಆಚಾರ್ಯ ಮಾತನಾಡಿ, ಬೇಷಾರಮ್ ರಂಗ್ ಹಾಡಿನಲ್ಲಿ ಕೇಸರಿ ಬಣ್ಣವನ್ನು ಅಶ್ಲೀಲವಾಗಿ ಚಿತ್ರಿಸಿ ಅಣಕಿಸಲಾಗಿದೆ. ಸನಾತನ ಧರ್ಮದ ಮಂದಿ ಇದಕ್ಕೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಇವತ್ತು ಶಾರುಖ್ ಖಾನ್ ಪೋಸ್ಟರನ್ನು ಸುಟ್ಟು ಹಾಕಲಾಗುತ್ತಿದೆ. ಆದರೆ ಜಿಹಾದಿ ಶಾರುಖ್ ಖಾನ್ ನನ್ನ ಎದುರಿಗೆ ಬಂದಲ್ಲಿ ಆತನನ್ನು ಜೀವಂತವಾಗಿಯೇ ಸುಟ್ಟು ಹಾಕುತ್ತೇನೆ ಎಂದು ಹೇಳಿದ್ದಾರೆ. ಸ್ವಾಮೀಜಿ ಹೀಗೆ ಹೇಳಿದ್ದಾಗಿ ಐಎಎನ್ಎಸ್ ಸುದ್ದಿಸಂಸ್ಥೆ ಪ್ರಕಟಿಸಿದೆ. ಅಲ್ಲದೆ, ಪಠಾಣ್ ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾದರೆ, ಅದನ್ನು ಪ್ರದರ್ಶನ ಮಾಡುವ ಥಿಯೇಟರನ್ನೂ ಸುಟ್ಟು ಹಾಕುತ್ತೇನೆ ಎಂದು ಸ್ವಾಮೀಜಿ ಹೇಳಿದ್ದಾಗಿ ಸುದ್ದಿಸಂಸ್ಥೆ ಹೇಳಿದೆ.
ಇದೇ ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮಧ್ಯಪ್ರದೇಶ ಸ್ವೀಕರ್ ಗಿರೀಶ್ ಗೌತಮ್, ಶಾರುಖ್ ಖಾನ್ ತನ್ನ ಪುತ್ರಿಯ ಜೊತೆಗೆ ಕುಳಿತು ಈ ಚಿತ್ರವನ್ನು ನೋಡಬೇಕು. ಅದರ ಚಿತ್ರವನ್ನು ಪೋಸ್ಟ್ ಮಾಡಬೇಕು. ಅಲ್ಲದೆ, ಆತ ಪ್ರವಾದಿ ಪೈಗಂಬರ್ ಕುರಿತು ಇದೇ ರೀತಿಯ ಚಿತ್ರವನ್ನು ಮಾಡಲಿ, ನಾನು ಸವಾಲು ಹಾಕುತ್ತೇನೆ ಎಂದಿದ್ದಾರೆ.
The controversy over Bollywood superstar Shah Rukh Khan's upcoming film ‘Pathaan’ refuses to die down and now a prominent seer from the holy city Ayodhya has waded into the controversy over the song 'Besharam Rang' in the movie also starring actress Deepika Padukone. According to media reports, Mahant Paramhans Acharya of Tapasvi Chhavni has said that he would burn Shah Rukh Khan alive if he ever met him.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm