ಬ್ರೇಕಿಂಗ್ ನ್ಯೂಸ್
21-12-22 08:37 pm HK News Desk ದೇಶ - ವಿದೇಶ
ನವದೆಹಲಿ, ಡಿ.21 : ಮಾನವ ರಹಿತ ವೈಮಾನಿಕ ವಾಹನಗಳ ವರ್ಗಕ್ಕೆ ಸೇರುವ ಎಂಕ್ಯೂ -9 ರೀಪರ್ ಡ್ರೋಣ್ ಗಳನ್ನು ಅಮೆರಿಕದಿಂದ ಖರೀದಿಸಲು ಭಾರತವು ಮುಂದಾಗಿದೆ. ಇದಕ್ಕಾಗಿ ಅಮೆರಿಕದೊಂದಿಗೆ ಬಿಲಿಯನ್ ಡಾಲರ್ ಮೊತ್ತದ ಒಪ್ಪಂದವನ್ನು ಮಾಡಿಕೊಳ್ಳಲಿದೆ.
ನಿಖರವಾದ ಗುರಿಗಳನ್ನು ಲೇಸರ್ ಆಧರಿಸಿ ಬೆನ್ನತ್ತಿ ಕ್ಷಿಪಣಿಗಳನ್ನು ಉಡಾಯಿಸುವುದರಿಂದ ಈ ಮಾದರಿಯ ಡ್ರೋಣ್ ಗಳನ್ನು ವಿಶ್ವದ ಅತ್ಯಂತ ಅಪಾಯಕಾರಿ ಅಸ್ತ್ರ ಎಂದು ಪರಿಗಣಿಸಲಾಗಿದೆ. ಅಲ್-ಖೈದಾ ಮುಖ್ಯಸ್ಥ ಅಯಮಾನ್ ಅಲ್ ಜವಾಹಿರಿಯನ್ನು ಕೊಲ್ಲಲು ಈ ಡ್ರೋಣ್ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ. ಡಿ.22ರಂದು ನಿಗದಿಯಾಗಿರುವ ರಕ್ಷಣಾ ಉಪಕರಣಗಳ ಖರೀದಿ ಕುರಿತ ಮಂಡಳಿ ಸಭೆಯಲ್ಲಿ ಚರ್ಚೆಗೆ ಪಟ್ಟಿ ಮಾಡಲಾದ ಪ್ರಸ್ತಾವನೆಗಳಲ್ಲಿ ಎಂಕ್ಯು-9 ರೀಪರ್ ಖರೀದಿಯೂ ಒಂದು ಎನ್ನಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಇಲಾಖೆ ಕಾರ್ಯದರ್ಶಿ, ರಕ್ಷಣಾ ಸಚಿವಾಲಯದ ಇತರ ಉನ್ನತ ಅಧಿಕಾರಿಗಳು, ಕಿರಿಯ ಸಚಿವರು ಮತ್ತು ಮೂರು ಸೇನೆಗಳ ಮುಖ್ಯಸ್ಥರು ಮಂಡಳಿಯ ಸದಸ್ಯರು. ಇವರ ಸಭೆಯಲ್ಲಿ ಈ ಕುರಿತು ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ.
ಗುಪ್ತಚರ, ಕಣ್ಗಾವಲು, ವಿಚಕ್ಷಣ ಮತ್ತು ನಿಖರ ದಾಳಿಗಳಿಗೆ ಈ ಮಾದರಿಯ ಡ್ರೋಣ್ ಗಳನ್ನು ಬಳಸಲಾಗುತ್ತದೆ. ಇದನ್ನು ಭೂಮಿಯ ಮೇಲಿನ ನಿಲ್ದಾಣ ಮತ್ತು ಹಡಗಿನಿಂದಲೂ ನಿಯಂತ್ರಿಸಬಹುದು. ಮೂಲಗಳ ಪ್ರಕಾರ, ಸರ್ಕಾರವು 30 MQ-9 ವಾಹನಗಳನ್ನು ಮೂರು ಸೇನಾ ಪಡೆಗಳಿಗೆ ತಲಾ 10ರಂತೆ ಖರೀದಿಸಲು ಯೋಜಿಸಿದೆ.
ಭಾರತೀಯ ನೌಕಾಪಡೆಯು 2017 ರಲ್ಲಿ ಎರಡು MQ-9 ಗಳನ್ನು ಎರಡು ವರ್ಷಗಳ ಗುತ್ತಿಗೆಗೆ ಪಡೆದಿತ್ತು. ಹಿಂದೂ ಮಹಾಸಾಗರದಲ್ಲಿ ಕಣ್ಗಾವಲಿಗಾಗಿ ಅವುಗಳನ್ನು ಪಡೆಯಲಾಗಿತ್ತು.
India is likely to enter into a billion-dollar deal with the US to buy MQ-9 Reaper drones, which fall in the category of hunter-killer Unmanned Aerial Vehicles (UAVs). They are considered the world’s most dangerous as they use laser-guided Hellfire missiles for precision strikes. The drone was reportedly used to kill Al-Qaeda chief Ayman al-Zawahiri.Sources said their purchase is one of the proposals listed for discussion in the Defence Acquisition Council (DAC) meet scheduled on Thursday.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm