ಬ್ರೇಕಿಂಗ್ ನ್ಯೂಸ್
21-12-22 08:37 pm HK News Desk ದೇಶ - ವಿದೇಶ
ನವದೆಹಲಿ, ಡಿ.21 : ಮಾನವ ರಹಿತ ವೈಮಾನಿಕ ವಾಹನಗಳ ವರ್ಗಕ್ಕೆ ಸೇರುವ ಎಂಕ್ಯೂ -9 ರೀಪರ್ ಡ್ರೋಣ್ ಗಳನ್ನು ಅಮೆರಿಕದಿಂದ ಖರೀದಿಸಲು ಭಾರತವು ಮುಂದಾಗಿದೆ. ಇದಕ್ಕಾಗಿ ಅಮೆರಿಕದೊಂದಿಗೆ ಬಿಲಿಯನ್ ಡಾಲರ್ ಮೊತ್ತದ ಒಪ್ಪಂದವನ್ನು ಮಾಡಿಕೊಳ್ಳಲಿದೆ.
ನಿಖರವಾದ ಗುರಿಗಳನ್ನು ಲೇಸರ್ ಆಧರಿಸಿ ಬೆನ್ನತ್ತಿ ಕ್ಷಿಪಣಿಗಳನ್ನು ಉಡಾಯಿಸುವುದರಿಂದ ಈ ಮಾದರಿಯ ಡ್ರೋಣ್ ಗಳನ್ನು ವಿಶ್ವದ ಅತ್ಯಂತ ಅಪಾಯಕಾರಿ ಅಸ್ತ್ರ ಎಂದು ಪರಿಗಣಿಸಲಾಗಿದೆ. ಅಲ್-ಖೈದಾ ಮುಖ್ಯಸ್ಥ ಅಯಮಾನ್ ಅಲ್ ಜವಾಹಿರಿಯನ್ನು ಕೊಲ್ಲಲು ಈ ಡ್ರೋಣ್ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ. ಡಿ.22ರಂದು ನಿಗದಿಯಾಗಿರುವ ರಕ್ಷಣಾ ಉಪಕರಣಗಳ ಖರೀದಿ ಕುರಿತ ಮಂಡಳಿ ಸಭೆಯಲ್ಲಿ ಚರ್ಚೆಗೆ ಪಟ್ಟಿ ಮಾಡಲಾದ ಪ್ರಸ್ತಾವನೆಗಳಲ್ಲಿ ಎಂಕ್ಯು-9 ರೀಪರ್ ಖರೀದಿಯೂ ಒಂದು ಎನ್ನಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಇಲಾಖೆ ಕಾರ್ಯದರ್ಶಿ, ರಕ್ಷಣಾ ಸಚಿವಾಲಯದ ಇತರ ಉನ್ನತ ಅಧಿಕಾರಿಗಳು, ಕಿರಿಯ ಸಚಿವರು ಮತ್ತು ಮೂರು ಸೇನೆಗಳ ಮುಖ್ಯಸ್ಥರು ಮಂಡಳಿಯ ಸದಸ್ಯರು. ಇವರ ಸಭೆಯಲ್ಲಿ ಈ ಕುರಿತು ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ.
ಗುಪ್ತಚರ, ಕಣ್ಗಾವಲು, ವಿಚಕ್ಷಣ ಮತ್ತು ನಿಖರ ದಾಳಿಗಳಿಗೆ ಈ ಮಾದರಿಯ ಡ್ರೋಣ್ ಗಳನ್ನು ಬಳಸಲಾಗುತ್ತದೆ. ಇದನ್ನು ಭೂಮಿಯ ಮೇಲಿನ ನಿಲ್ದಾಣ ಮತ್ತು ಹಡಗಿನಿಂದಲೂ ನಿಯಂತ್ರಿಸಬಹುದು. ಮೂಲಗಳ ಪ್ರಕಾರ, ಸರ್ಕಾರವು 30 MQ-9 ವಾಹನಗಳನ್ನು ಮೂರು ಸೇನಾ ಪಡೆಗಳಿಗೆ ತಲಾ 10ರಂತೆ ಖರೀದಿಸಲು ಯೋಜಿಸಿದೆ.
ಭಾರತೀಯ ನೌಕಾಪಡೆಯು 2017 ರಲ್ಲಿ ಎರಡು MQ-9 ಗಳನ್ನು ಎರಡು ವರ್ಷಗಳ ಗುತ್ತಿಗೆಗೆ ಪಡೆದಿತ್ತು. ಹಿಂದೂ ಮಹಾಸಾಗರದಲ್ಲಿ ಕಣ್ಗಾವಲಿಗಾಗಿ ಅವುಗಳನ್ನು ಪಡೆಯಲಾಗಿತ್ತು.
India is likely to enter into a billion-dollar deal with the US to buy MQ-9 Reaper drones, which fall in the category of hunter-killer Unmanned Aerial Vehicles (UAVs). They are considered the world’s most dangerous as they use laser-guided Hellfire missiles for precision strikes. The drone was reportedly used to kill Al-Qaeda chief Ayman al-Zawahiri.Sources said their purchase is one of the proposals listed for discussion in the Defence Acquisition Council (DAC) meet scheduled on Thursday.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm