ಬ್ರೇಕಿಂಗ್ ನ್ಯೂಸ್
21-12-22 08:37 pm HK News Desk ದೇಶ - ವಿದೇಶ
ನವದೆಹಲಿ, ಡಿ.21 : ಮಾನವ ರಹಿತ ವೈಮಾನಿಕ ವಾಹನಗಳ ವರ್ಗಕ್ಕೆ ಸೇರುವ ಎಂಕ್ಯೂ -9 ರೀಪರ್ ಡ್ರೋಣ್ ಗಳನ್ನು ಅಮೆರಿಕದಿಂದ ಖರೀದಿಸಲು ಭಾರತವು ಮುಂದಾಗಿದೆ. ಇದಕ್ಕಾಗಿ ಅಮೆರಿಕದೊಂದಿಗೆ ಬಿಲಿಯನ್ ಡಾಲರ್ ಮೊತ್ತದ ಒಪ್ಪಂದವನ್ನು ಮಾಡಿಕೊಳ್ಳಲಿದೆ.
ನಿಖರವಾದ ಗುರಿಗಳನ್ನು ಲೇಸರ್ ಆಧರಿಸಿ ಬೆನ್ನತ್ತಿ ಕ್ಷಿಪಣಿಗಳನ್ನು ಉಡಾಯಿಸುವುದರಿಂದ ಈ ಮಾದರಿಯ ಡ್ರೋಣ್ ಗಳನ್ನು ವಿಶ್ವದ ಅತ್ಯಂತ ಅಪಾಯಕಾರಿ ಅಸ್ತ್ರ ಎಂದು ಪರಿಗಣಿಸಲಾಗಿದೆ. ಅಲ್-ಖೈದಾ ಮುಖ್ಯಸ್ಥ ಅಯಮಾನ್ ಅಲ್ ಜವಾಹಿರಿಯನ್ನು ಕೊಲ್ಲಲು ಈ ಡ್ರೋಣ್ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ. ಡಿ.22ರಂದು ನಿಗದಿಯಾಗಿರುವ ರಕ್ಷಣಾ ಉಪಕರಣಗಳ ಖರೀದಿ ಕುರಿತ ಮಂಡಳಿ ಸಭೆಯಲ್ಲಿ ಚರ್ಚೆಗೆ ಪಟ್ಟಿ ಮಾಡಲಾದ ಪ್ರಸ್ತಾವನೆಗಳಲ್ಲಿ ಎಂಕ್ಯು-9 ರೀಪರ್ ಖರೀದಿಯೂ ಒಂದು ಎನ್ನಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಇಲಾಖೆ ಕಾರ್ಯದರ್ಶಿ, ರಕ್ಷಣಾ ಸಚಿವಾಲಯದ ಇತರ ಉನ್ನತ ಅಧಿಕಾರಿಗಳು, ಕಿರಿಯ ಸಚಿವರು ಮತ್ತು ಮೂರು ಸೇನೆಗಳ ಮುಖ್ಯಸ್ಥರು ಮಂಡಳಿಯ ಸದಸ್ಯರು. ಇವರ ಸಭೆಯಲ್ಲಿ ಈ ಕುರಿತು ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ.
ಗುಪ್ತಚರ, ಕಣ್ಗಾವಲು, ವಿಚಕ್ಷಣ ಮತ್ತು ನಿಖರ ದಾಳಿಗಳಿಗೆ ಈ ಮಾದರಿಯ ಡ್ರೋಣ್ ಗಳನ್ನು ಬಳಸಲಾಗುತ್ತದೆ. ಇದನ್ನು ಭೂಮಿಯ ಮೇಲಿನ ನಿಲ್ದಾಣ ಮತ್ತು ಹಡಗಿನಿಂದಲೂ ನಿಯಂತ್ರಿಸಬಹುದು. ಮೂಲಗಳ ಪ್ರಕಾರ, ಸರ್ಕಾರವು 30 MQ-9 ವಾಹನಗಳನ್ನು ಮೂರು ಸೇನಾ ಪಡೆಗಳಿಗೆ ತಲಾ 10ರಂತೆ ಖರೀದಿಸಲು ಯೋಜಿಸಿದೆ.
ಭಾರತೀಯ ನೌಕಾಪಡೆಯು 2017 ರಲ್ಲಿ ಎರಡು MQ-9 ಗಳನ್ನು ಎರಡು ವರ್ಷಗಳ ಗುತ್ತಿಗೆಗೆ ಪಡೆದಿತ್ತು. ಹಿಂದೂ ಮಹಾಸಾಗರದಲ್ಲಿ ಕಣ್ಗಾವಲಿಗಾಗಿ ಅವುಗಳನ್ನು ಪಡೆಯಲಾಗಿತ್ತು.
India is likely to enter into a billion-dollar deal with the US to buy MQ-9 Reaper drones, which fall in the category of hunter-killer Unmanned Aerial Vehicles (UAVs). They are considered the world’s most dangerous as they use laser-guided Hellfire missiles for precision strikes. The drone was reportedly used to kill Al-Qaeda chief Ayman al-Zawahiri.Sources said their purchase is one of the proposals listed for discussion in the Defence Acquisition Council (DAC) meet scheduled on Thursday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm