ಬ್ರೇಕಿಂಗ್ ನ್ಯೂಸ್
21-12-22 09:18 pm HK News Desk ದೇಶ - ವಿದೇಶ
ನವದೆಹಲಿ, ಡಿ.21 : ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಲು ಸಾಧ್ಯವಾಗದಿದ್ದರೆ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು ಕಾಂಗ್ರೆಸ್'ಗೆ ಕೇಂದ್ರ ಸರ್ಕಾರ ಬುಧವಾರ ಸೂಚನೆ ನೀಡಿದೆ.
ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಚೀನಾದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಲ್ಲಿನ ಸ್ಥಿತಿಗತಿ ಕುರಿತು ಚರ್ಚಿಸಿ ಆರೋಗ್ಯ ಸಚಿವರು ಈ ಸೂಚನೆ ಕೊಟ್ಟಿದ್ದಾರೆಂದು ತಿಳಿದುಬಂದಿದೆ.

ಭಾರತ್ ಜೋಡೊ ಯಾತ್ರೆಯಲ್ಲಿ ಕೋವಿಡ್ ತಡೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಪಾಲನೆಯಾಗದಿದ್ದರೇ ಯಾತ್ರೆಯನ್ನು ನಿಲ್ಲಿಸುವುದು ಸೂಕ್ತ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಈ ವಿಚಾರವನ್ನು ತಲೆಯಲ್ಲಿಟ್ಟುಕೊಳ್ಳಿ ಎಂದು ಪತ್ರದಲ್ಲಿ ಸೂಚಿಸಿದ್ದಾರೆ. ಯಾತ್ರೆಯಲ್ಲಿ ಭಾಗವಹಿಸಿದ ನಂತರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕೊರೋನಾ ವೈರಸ್ ಸೋಂಕಿಗೆ ಒಳಗಾಗಿದ್ದನ್ನು ಉಲ್ಲೇಖಿಸಿ ರಾಜಸ್ಥಾನದ ಮೂವರು ಸಂಸದರು ಬರೆದಿರುವ ಪತ್ರವನ್ನು ಕೂಡ ಕೇಂದ್ರ ಸಚಿವರು ರಾಹುಲ್ ಗಾಂಧಿಗೆ ಕಳುಹಿಸಿರುವ ಪತ್ರದಲ್ಲಿ ಲಗತ್ತಿಸಿದ್ದಾರೆ. ಈ ನಡುವೆ, ರಾಹುಲ್ ಪಾದಯಾತ್ರೆ ಬುಧವಾರ ಹರಿಯಾಣ ಪ್ರವೇಶ ಮಾಡಿದೆ.
Union health minister Mansukh Mandaviya has written to Rahul Gandhi and Rajasthan chief minister Ashok Gehlot asking them to ensure that proper Covid guidelines are being followed in the Bharat Jodo Yatra which on Wednesday entered Haryana from Rajasthan. If it is not possible to follow the Covid regulations, then the yatra should be stopped keeping in mind the 'public health emergency' situation, the health minister's letter said. Read | Centre's genome sequencing notice to states, UTs amid China's Covid spurt
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm