ಬ್ರೇಕಿಂಗ್ ನ್ಯೂಸ್
21-12-22 09:18 pm HK News Desk ದೇಶ - ವಿದೇಶ
ನವದೆಹಲಿ, ಡಿ.21 : ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಲು ಸಾಧ್ಯವಾಗದಿದ್ದರೆ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು ಕಾಂಗ್ರೆಸ್'ಗೆ ಕೇಂದ್ರ ಸರ್ಕಾರ ಬುಧವಾರ ಸೂಚನೆ ನೀಡಿದೆ.
ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಚೀನಾದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಲ್ಲಿನ ಸ್ಥಿತಿಗತಿ ಕುರಿತು ಚರ್ಚಿಸಿ ಆರೋಗ್ಯ ಸಚಿವರು ಈ ಸೂಚನೆ ಕೊಟ್ಟಿದ್ದಾರೆಂದು ತಿಳಿದುಬಂದಿದೆ.

ಭಾರತ್ ಜೋಡೊ ಯಾತ್ರೆಯಲ್ಲಿ ಕೋವಿಡ್ ತಡೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಪಾಲನೆಯಾಗದಿದ್ದರೇ ಯಾತ್ರೆಯನ್ನು ನಿಲ್ಲಿಸುವುದು ಸೂಕ್ತ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಈ ವಿಚಾರವನ್ನು ತಲೆಯಲ್ಲಿಟ್ಟುಕೊಳ್ಳಿ ಎಂದು ಪತ್ರದಲ್ಲಿ ಸೂಚಿಸಿದ್ದಾರೆ. ಯಾತ್ರೆಯಲ್ಲಿ ಭಾಗವಹಿಸಿದ ನಂತರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕೊರೋನಾ ವೈರಸ್ ಸೋಂಕಿಗೆ ಒಳಗಾಗಿದ್ದನ್ನು ಉಲ್ಲೇಖಿಸಿ ರಾಜಸ್ಥಾನದ ಮೂವರು ಸಂಸದರು ಬರೆದಿರುವ ಪತ್ರವನ್ನು ಕೂಡ ಕೇಂದ್ರ ಸಚಿವರು ರಾಹುಲ್ ಗಾಂಧಿಗೆ ಕಳುಹಿಸಿರುವ ಪತ್ರದಲ್ಲಿ ಲಗತ್ತಿಸಿದ್ದಾರೆ. ಈ ನಡುವೆ, ರಾಹುಲ್ ಪಾದಯಾತ್ರೆ ಬುಧವಾರ ಹರಿಯಾಣ ಪ್ರವೇಶ ಮಾಡಿದೆ.
Union health minister Mansukh Mandaviya has written to Rahul Gandhi and Rajasthan chief minister Ashok Gehlot asking them to ensure that proper Covid guidelines are being followed in the Bharat Jodo Yatra which on Wednesday entered Haryana from Rajasthan. If it is not possible to follow the Covid regulations, then the yatra should be stopped keeping in mind the 'public health emergency' situation, the health minister's letter said. Read | Centre's genome sequencing notice to states, UTs amid China's Covid spurt
18-03-26 11:00 pm
supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm