ಬ್ರೇಕಿಂಗ್ ನ್ಯೂಸ್
23-12-22 07:33 pm HK News Desk ದೇಶ - ವಿದೇಶ
ನವದೆಹಲಿ, ಡಿ 23: ಚೀನಾ, ಅಮೆರಿಕ ಮತ್ತು ಬ್ರಿಟನ್ ನಲ್ಲಿ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ BF.7 ಅಬ್ಬರದ ನಡುವೆಯೇ ಇಂದು ದೇಶಾದ್ಯಂತ 163 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದೆ.
ಶುಕ್ರವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 163 ಹೊಸ ಕೊರೋನವೈರಸ್ ಸೋಂಕು ಪ್ರಕರಣಗಳು ವರದಿಯಾಗಿದೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,380 ಕ್ಕೆ ಇಳಿದಿದೆ.
ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,76,678) ದಾಖಲಾಗಿದ್ದು, 24 ಗಂಟೆಗಳ ಅವಧಿಯಲ್ಲಿ ಒಂಬತ್ತು ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಮಹಾಮಾರಿಗೆ ಬಲಿಯಾದವರ ಸಂಖ್ಯೆ 5,30,690ಕ್ಕೆ ಏರಿಕೆಯಾಗಿದೆ. ಈ 9 ಪ್ರಕರಣಗಳ ಪೈಕಿ ಕೇರಳ ರಾಜ್ಯವೊಂದರಲ್ಲೇ 6 ಸಾವುಗಳು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಿಂದ ಎರಡು ಮತ್ತು ದೆಹಲಿಯಿಂದ ಒಂದು ಸಾವು ವರದಿಯಾಗಿದೆ ಎಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಡೇಟಾ ತಿಳಿಸಿದೆ.
ಇನ್ನು ಒಟ್ಟು ಸೋಂಕುಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 0.01 ಪ್ರತಿಶತವನ್ನು ಒಳಗೊಂಡಿವೆ, ಆದರೆ ರಾಷ್ಟ್ರೀಯ COVID-19 ಚೇತರಿಕೆ ದರವು 98.80 ಪ್ರತಿಶತಕ್ಕೆ ಹೆಚ್ಚಾಗಿದೆ ಎಂದು ಸಚಿವಾಲಯ ತಿಳಿಸಿದೆ.
24 ಗಂಟೆಗಳ ಅವಧಿಯಲ್ಲಿ ಸಕ್ರಿಯ COVID-19 ಪ್ರಕರಣಗಳ ಸಂಖ್ಯೆಯಲ್ಲಿ 22 ಪ್ರಕರಣಗಳ ಇಳಿಕೆ ದಾಖಲಾಗಿದೆ. ಅಂತೆಯೇ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,41,42,608 ಕ್ಕೆ ಏರಿದೆ. ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ಸಚಿವಾಲಯದ ವೆಬ್ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ ಈ ವರೆಗೂ 220.03 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
India logged 163 new coronavirus infections, while the active cases declined to 3,380, according to the Union Health Ministry data updated on Friday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm