ಬ್ರೇಕಿಂಗ್ ನ್ಯೂಸ್
28-12-22 12:27 pm HK News Desk ದೇಶ - ವಿದೇಶ
ಮುಂಬೈ, ಡಿ.28: ಗಡಿ ವಿವಾದ ಕುರಿತು ಕರ್ನಾಟಕ ವಿಧಾನಸಭೆ ಸರ್ವಾನುಮತದ ನಿರ್ಣಯ ಕೈಗೊಂಡ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರಕಾರ, ಕರ್ನಾಟಕದ “ಮರಾಠಿ ವಿರೋಧಿ” ನಿಲುವನ್ನು ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯವನ್ನು ಸ್ವೀಕರಿಸಿದೆ. ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾತುಕತೆ ಮೂಲಕ ವಿವಾದ ಬಗೆಹರಿಸಲು ಸೂಚಿಸಿದ್ದರೂ ಮಹಾರಾಷ್ಟ್ರ ಸರ್ಕಾರ ಕೇಂದ್ರಕ್ಕೆ ಸಡ್ಡು ಹೊಡೆದು ನಿರ್ಣಯ ಸ್ವೀಕರಿಸಿದ್ದು ಹೊಸ ರೀತಿಯ ಬಿಕ್ಕಟ್ಟಿಗೆ ಕಾರಣವಾಗಿದೆ.
ಎರಡು ರಾಜ್ಯಗಳ ನಡುವೆ ಗಡಿ ವಿವಾದ ತಲೆದೋರಿದ್ದರೆ, ಉಭಯ ರಾಜ್ಯಗಳಲ್ಲೂ ಬಿಜೆಪಿ ಆಡಳಿತ ನಡೆಸುತ್ತಿರುವುದು ವಿಶೇಷ. ಮುಂದಿನ ವರ್ಷ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಡಿ ವಿಚಾರದಲ್ಲಿ ಸೂಚನೆ ನಡುವೆಯೂ ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ವಿರುದ್ಧ ನಿರ್ಣಯ ಕೈಗೊಂಡಿದ್ದು ಸಮಸ್ಯೆ ಬಿಗಡಾಯಿಸಲು ಕಾರಣವಾಗಿದೆ.


ಮರಾಠಿ ಭಾಷೆ ಮಾತನಾಡುವ 865 ಗ್ರಾಮಗಳು ಹಾಗೂ ಈ ಗ್ರಾಮಗಳ ಎಲ್ಲಾ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆಗೊಳಿಸಲಿದ್ದೇವೆ. ಇದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ನಲ್ಲಿಯೂ ಮಹಾರಾಷ್ಟ್ರ ಸರ್ಕಾರ ಕಾನೂನು ಸಮರಕ್ಕೆ ಸಿದ್ಧವಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ನಿರ್ಣಯದಲ್ಲಿ ಉಲ್ಲೇಖಿಸಿದೆ. ಕರ್ನಾಟಕದ ಗಡಿಭಾಗದ ಬೆಳಗಾವಿ, ಕಾರವಾರ, ಬೀದರ್, ನಿಪ್ಪಾಣಿ, ಭಾಲ್ಕಿ ತಾಲೂಕಿನ 865 ಗ್ರಾಮಗಳ ಪ್ರತಿ ಇಂಚು ಜಾಗವೂ ಮಹಾರಾಷ್ಟ್ರದ ಭಾಗವಾಗಿರಲಿದೆ ಎಂದು ನಿರ್ಣಯದಲ್ಲಿ ಮಹಾರಾಷ್ಟ್ರ ಸರ್ಕಾರ ನಿರ್ಣಯ ಅಂಗೀಕರಿಸಿದ್ದು ಗಡಿ ವಿವಾದಕ್ಕೆ ಬೆಂಕಿ ಹಚ್ಚಿದಂತಾಗಿದೆ.
ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಖಂಡಿಸಿದ್ದು ಈ ಬಗ್ಗೆ ಕೇಂದ್ರಕ್ಕೆ ದೂರು ಒಯ್ಯಲು ನಿರ್ಧರಿಸಿದ್ದಾರೆ.
The Maharashtra resolution stated there are 865 Marathi-speaking villages, and "every inch of these villages will be brought into Maharashtra". Whatever will be required for the same in Supreme Court, the Maharashtra government will do so, it added. The resolution asserts that 865 villages, including "every inch of Belgaum, Karwar, Bidar, Nipani, Bhalki" will be part of Maharashtra.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm