ಬ್ರೇಕಿಂಗ್ ನ್ಯೂಸ್
29-12-22 01:19 pm HK News Desk ದೇಶ - ವಿದೇಶ
ಬ್ಯಾಂಕಾಕ್-ಕೋಲ್ಕತ್ತಾ ವಿಮಾನದಲ್ಲಿ ಪ್ರಯಾಣಿಕರು ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಥಾಯ್ ಸ್ಮೈಲ್ ಏರ್ವೇಸ್ ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರು ಘಟನೆಯನ್ನು ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ವಿಡಿಯೋದಲ್ಲಿ ಇಬ್ಬರು ಪುರುಷರು ಪರಸ್ಪರ ಜಗಳವಾಡುತ್ತಿರುವುದನ್ನು ಕಾಣಬಹುದು. ಜೊತೆಗೆ ವಿಮಾನದ ಸಿಬ್ಬಂದಿಗಳು ಪರಿಸ್ಥಿತಿಯನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ.

ಪುರುಷರಲ್ಲಿ ಒಬ್ಬರು "ಶಾಂತಿ ಸೆ ಬಾತ್" (ಸದ್ದಿಲ್ಲದೆ ಕುಳಿತುಕೊಳ್ಳಿ) ಎಂದು ಹೇಳುವುದನ್ನು ಕೇಳಬಹುದು. ಆದರೆ ಇನ್ನೊಬ್ಬರು "ಹಾತ್ ನೀಚೆ ಕರ್" (ನಿಮ್ಮ ಕೈಯನ್ನು ಕೆಳಕ್ಕೆ ಇರಿಸಿ) ಎಂದು ಹೇಳುತ್ತಾರೆ. ಕೆಲವೇ ಸೆಕೆಂಡುಗಳಲ್ಲಿ ಈ ಮಾತುಗಳು ವಿಕೋಪಕ್ಕೆ ತಿರುಗಿ ದೈಹಿಕ ಹಲ್ಲೆ ನಡೆಯುತ್ತದೆ. ಪ್ರಯಾಣಿಕನ ಮೇಲೆ ಹಲವಾರು ಪ್ರಯಾಣಿಕರು ಹಲ್ಲೆ ಮಾಡುತ್ತಾರೆ.

ವ್ಯಕ್ತಿ ತನ್ನ ಕನ್ನಡಕವನ್ನು ತೆಗೆದು ನಂತರ ಇನ್ನೊಬ್ಬ ವ್ಯಕ್ತಿಗೆ ಹೊಡೆಯುವುದನ್ನು ಕಾಣಬಹುದು. ವ್ಯಕ್ತಿಯ ಸ್ನೇಹಿತರು ಜಗಳಕ್ಕೆ ಸೇರುತ್ತಾರೆ. ಹೊಡೆಸಿಕೊಳ್ಳುವ ವ್ಯಕ್ತಿ ತನ್ನನ್ನು ತಾನು ರಕ್ಷಿಸಿಕೊಳ್ಳುವುದನ್ನು ಮಾತ್ರ ಕಾಣಬಹುದು.

ಕೆಲವು ಫ್ಲೈಟ್ ಅಟೆಂಡೆಂಟ್ಗಳು ಇಬ್ಬರನ್ನು ಜಗಳವನ್ನು ತಡೆಯಲು ಪ್ರಯತ್ನಿಸುತ್ತಾರೆ. ಮೊದಲು ಸಹ-ಪ್ರಯಾಣಿಕರು ಮತ್ತು ಕ್ಯಾಬಿನ್ ಸಿಬ್ಬಂದಿ ಜಗಳವನ್ನು ನಿಲ್ಲಿಸುವಂತೆ ವ್ಯಕ್ತಿಯನ್ನು ಕೇಳಿಕೊಳ್ಳುತ್ತಾರೆ. ಆದರೆ ಪ್ರಯಾಣಿಕರು ಅವರ ಮಾತನ್ನು ಕೇಳುವುದಿಲ್ಲ. ಬ್ಯಾಂಕಾಕ್ನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಇಲ್ಲಿಯವರೆಗೆ, ಥಾಯ್ ಸ್ಮೈಲ್ ಏರ್ವೇಸ್ ಈ ಸಮಸ್ಯೆಗೆ ಪ್ರತಿಕ್ರಿಯಿಸಿಲ್ಲ ಮತ್ತು ಅಪರಾಧಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಯಾವುದೇ ಅಪ್ಡೇಟ್ ಇಲ್ಲ.
Not many smiles on this @ThaiSmileAirway flight at all !
— VT-VLO (@Vinamralongani) December 28, 2022
On a serious note, an aircraft is possibly the worst place ever to get into an altercation with someone.
Hope these nincompoops were arrested on arrival and dealt with by the authorities.#AvGeek pic.twitter.com/XCglmjtc9l
The Bureau of Civil Aviation Security, an organisation that monitors aviation security, has taken cognisance of a viral video that showed passengers engaged in a brawl on a Bangkok-Kolkata flight. It has sought a detailed report of the incident.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm