ಬ್ರೇಕಿಂಗ್ ನ್ಯೂಸ್
07-01-23 08:59 pm HK News Desk ದೇಶ - ವಿದೇಶ
ಕಾಸರಗೋಡು, ಜ.7 : ಬಿರಿಯಾನಿ ತಿಂದು ಅಸ್ವಸ್ಥಳಾಗಿದ್ದ ಉದುಮ ಮೂಲದ ಯುವತಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಪೆರುಂಬಳ ಬೇನೂರು ನಿವಾಸಿ ಅಂಜುಶ್ರೀ ಪಾರ್ವತಿ (19) ಮೃತ ಯುವತಿ.
ಆರು ದಿನಗಳ ಹಿಂದೆ ಉದುಮದ ಹೋಟೆಲ್ ಒಂದರಿಂದ ಆನ್ಲೈನ್ ಮೂಲಕ ಕುಜಿಮಂತಿ ಹೆಸರಿನ ಚಿಕನ್ ಬಿರಿಯಾನಿ ತರಿಸಿ ಅಂಜುಶ್ರೀ ಸೇವಿಸಿದ್ದಳು. ಇದಾದ ಬಳಿಕ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಕಾಸರಗೋಡಿನಲ್ಲಿ ಮೊದಲು ಚಿಕಿತ್ಸೆ ಪಡೆದು ಬಳಿಕ ಪರಿಸ್ಥಿತಿ ಗಂಭೀರವಾದ ಬೆನ್ನಲ್ಲೇ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಪುಡ್ ಪಾಯಿಸನ್ನಿಂದ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಹೊಸ ವರ್ಷದ ಹಿನ್ನೆಲೆಯಲ್ಲಿ ಬಿರಿಯಾನಿ ತರಿಸಿ ಊಟ ಮಾಡಿದ್ದರು. ಅಂಜು ಜೊತೆಗೆ ಊಟ ಮಾಡಿದ ಸ್ನೇಹಿತರಿಗೂ ಫುಡ್ ಪಾಯಿಸನ್ ಆಗಿದ್ದು, ಅವರು ಕೂಡ ಅಸ್ವಸ್ಥರಾಗಿದ್ದರು. ಆದರೆ ಅಂಜುಶ್ರೀ ಆರೋಗ್ಯ ಮಾತ್ರ ಹೆಚ್ಚು ಗಂಭೀರವಾಗಿತ್ತು. ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಅಂಜುಶ್ರೀ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದು, ಮೇಲ್ಪರಂಬ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಕಾಸರಗೋಡು ಮತ್ತು ಕಣ್ಣೂರಿನ ಅಧಿಕಾರಿಗಳು ಹೋಟೆಲ್ಗೆ ಭೇಟಿ ತನಿಖೆ ನಡೆಸಿದ್ದಾರೆ. ಅಂಜುಶ್ರೀ ಮಂಜೇಶ್ವರದ ಗೋವಿಂದ ಪೈ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದಳು.
ಕಳೆದ ಒಂದು ವಾರದ ಅಂತರದಲ್ಲಿ ಇದು ಎರಡನೇ ಫುಡ್ ಪಾಯಿಸನ್ ಸಾವಾಗಿದೆ. ಕೊಟ್ಟಾಯಂ ಮೂಲದ ರಶ್ಮಿ ಅವರು 'ಅಲ್ಫಾಹಮ್' ಸೇವಿಸಿ ಸೋಮವಾರ ಮೃತಪಟ್ಟಿದ್ದರು. ಅಲ್ಲದೆ ಇತ್ತೀಚೆಗೆ ಕಾಸರಗೋಡಿನಲ್ಲಿ ದೇವಾನಂದ ಎಂಬ ಬಾಲಕಿ ಶವರ್ಮಾ ತಿಂದು ಸಾವನ್ನಪ್ಪಿದ್ದಳು.
In another suspected case of food poisoning, a 20-year old woman died on Saturday after allegedly consuming Kuzhimanthi, a biryani dish from a local hotel. Police said Anju Sreeparvathy from Perumbala near here, had consumed Kuzhimanthi which she purchased online from a restaurant named Romansia at Kasaragod on December 31 and was undergoing treatment since then.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm