ಬ್ರೇಕಿಂಗ್ ನ್ಯೂಸ್
08-01-23 06:00 pm HK News Desk ದೇಶ - ವಿದೇಶ
ಕಾಸರಗೋಡು, ಜ.8 : ಬಿರಿಯಾನಿ ತಿಂದು 19 ವರ್ಷದ ಯುವತಿ ಸಾವನ್ನಪ್ಪಿದ ಪ್ರಕರಣ ಕೇರಳದಲ್ಲಿ ಸಂಚಲನ ಸೃಷ್ಟಿಸಿದೆ. ಕುಜಿಮಂತಿ ಎನ್ನುವ ಕೇರಳದ ವಿಶೇಷ ಮಾದರಿಯ ಬಿರಿಯಾನಿ ತಿಂದ ಬಳಿಕ ಅಂಜುಶ್ರೀ ಸೇರಿದಂತೆ ಕುಟುಂಬದ ನಾಲ್ವರು ಅಸ್ವಸ್ಥರಾಗಿದ್ದರು. ಆದರೆ ಅಂಜುಶ್ರೀ ಮಾತ್ರ ದುರಂತ ಸಾವು ಕಂಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಅಂಜುಶ್ರೀ ಮತ್ತು ಆಕೆಯ ಸ್ನೇಹಿತರು ಡಿಸೆಂಬರ್ 31 ರಂದು ಉದುಮದ ಅಲ್ ರೊಮ್ಯಾನ್ಸಿಯಾ ಹೋಟೆಲ್ನಿಂದ ಕೇರಳದ ವಿಶೇಷ ಬಿರಿಯಾನಿ ಕುಜಿಮಂತಿಯನ್ನು ಆರ್ಡರ್ ಮಾಡಿದ್ದರು. ಆಕೆಯ ಸೋದರಿ ಅನುಶ್ರೀ ಪ್ರಕಾರ, ಅಂಜು ಸೇರಿ ನಾಲ್ಕು ಜನ ಬಿರಿಯಾನಿ ಸೇವಿಸಿದ್ದಾರೆ ಮತ್ತು ಅವರಲ್ಲಿ ಇಬ್ಬರಿಗೆ ತಕ್ಷಣ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಂಜುಶ್ರೀ ಅಸ್ವಸ್ಥಗೊಂಡಿದ್ದರಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ಬಳಿಕ ಆಕೆ ಮನೆಗೆ ಮರಳಿದ್ದಳು. ಆದರೆ, ಶುಕ್ರವಾರ ಬೆಳಗ್ಗೆ ಮತ್ತೆ ಪ್ರಜ್ಞಾಹೀನಳಾಗಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಿಸದೇ ಅಂಜು ಕೊನೆಯುಸಿರೆಳೆದಳು.
ಘಟನೆಗೆ ಸಂಬಂಧಿಸಿದಂತೆ ಅಲ್ ರೊಮ್ಯಾನ್ಸಿಯಾ ಹೋಟೆಲ್ ಮಾಲೀಕ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಹೊಟೇಲ್ಗೆ ಬೀಗ ಹಾಕಿ ಸೀಲ್ ಮಾಡಿದೆ. ಅಂಜು ಕುಟುಂಬ ನೀಡಿದ ದೂರಿನ ಮೇರೆಗೆ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಗ್ಗೆ ಕುತೂಹಲ ಮೂಡಿದ್ದು ಬಿರಿಯಾನಿಯಲ್ಲಿ ಏನಿದ್ದಿರಬಹುದು ಎಂಬ ಬಗ್ಗೆ ಕುತೂಹಲ ಇದೆ. ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.
Kerala Woman dies after eating Biryani, three including restaurant owner taken to custody.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm