ಬ್ರೇಕಿಂಗ್ ನ್ಯೂಸ್
08-01-23 06:00 pm HK News Desk ದೇಶ - ವಿದೇಶ
ಕಾಸರಗೋಡು, ಜ.8 : ಬಿರಿಯಾನಿ ತಿಂದು 19 ವರ್ಷದ ಯುವತಿ ಸಾವನ್ನಪ್ಪಿದ ಪ್ರಕರಣ ಕೇರಳದಲ್ಲಿ ಸಂಚಲನ ಸೃಷ್ಟಿಸಿದೆ. ಕುಜಿಮಂತಿ ಎನ್ನುವ ಕೇರಳದ ವಿಶೇಷ ಮಾದರಿಯ ಬಿರಿಯಾನಿ ತಿಂದ ಬಳಿಕ ಅಂಜುಶ್ರೀ ಸೇರಿದಂತೆ ಕುಟುಂಬದ ನಾಲ್ವರು ಅಸ್ವಸ್ಥರಾಗಿದ್ದರು. ಆದರೆ ಅಂಜುಶ್ರೀ ಮಾತ್ರ ದುರಂತ ಸಾವು ಕಂಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಅಂಜುಶ್ರೀ ಮತ್ತು ಆಕೆಯ ಸ್ನೇಹಿತರು ಡಿಸೆಂಬರ್ 31 ರಂದು ಉದುಮದ ಅಲ್ ರೊಮ್ಯಾನ್ಸಿಯಾ ಹೋಟೆಲ್ನಿಂದ ಕೇರಳದ ವಿಶೇಷ ಬಿರಿಯಾನಿ ಕುಜಿಮಂತಿಯನ್ನು ಆರ್ಡರ್ ಮಾಡಿದ್ದರು. ಆಕೆಯ ಸೋದರಿ ಅನುಶ್ರೀ ಪ್ರಕಾರ, ಅಂಜು ಸೇರಿ ನಾಲ್ಕು ಜನ ಬಿರಿಯಾನಿ ಸೇವಿಸಿದ್ದಾರೆ ಮತ್ತು ಅವರಲ್ಲಿ ಇಬ್ಬರಿಗೆ ತಕ್ಷಣ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಂಜುಶ್ರೀ ಅಸ್ವಸ್ಥಗೊಂಡಿದ್ದರಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ಬಳಿಕ ಆಕೆ ಮನೆಗೆ ಮರಳಿದ್ದಳು. ಆದರೆ, ಶುಕ್ರವಾರ ಬೆಳಗ್ಗೆ ಮತ್ತೆ ಪ್ರಜ್ಞಾಹೀನಳಾಗಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಿಸದೇ ಅಂಜು ಕೊನೆಯುಸಿರೆಳೆದಳು.
ಘಟನೆಗೆ ಸಂಬಂಧಿಸಿದಂತೆ ಅಲ್ ರೊಮ್ಯಾನ್ಸಿಯಾ ಹೋಟೆಲ್ ಮಾಲೀಕ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಹೊಟೇಲ್ಗೆ ಬೀಗ ಹಾಕಿ ಸೀಲ್ ಮಾಡಿದೆ. ಅಂಜು ಕುಟುಂಬ ನೀಡಿದ ದೂರಿನ ಮೇರೆಗೆ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಗ್ಗೆ ಕುತೂಹಲ ಮೂಡಿದ್ದು ಬಿರಿಯಾನಿಯಲ್ಲಿ ಏನಿದ್ದಿರಬಹುದು ಎಂಬ ಬಗ್ಗೆ ಕುತೂಹಲ ಇದೆ. ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.
Kerala Woman dies after eating Biryani, three including restaurant owner taken to custody.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm