ಬ್ರೇಕಿಂಗ್ ನ್ಯೂಸ್
08-01-23 06:00 pm HK News Desk ದೇಶ - ವಿದೇಶ
ಕಾಸರಗೋಡು, ಜ.8 : ಬಿರಿಯಾನಿ ತಿಂದು 19 ವರ್ಷದ ಯುವತಿ ಸಾವನ್ನಪ್ಪಿದ ಪ್ರಕರಣ ಕೇರಳದಲ್ಲಿ ಸಂಚಲನ ಸೃಷ್ಟಿಸಿದೆ. ಕುಜಿಮಂತಿ ಎನ್ನುವ ಕೇರಳದ ವಿಶೇಷ ಮಾದರಿಯ ಬಿರಿಯಾನಿ ತಿಂದ ಬಳಿಕ ಅಂಜುಶ್ರೀ ಸೇರಿದಂತೆ ಕುಟುಂಬದ ನಾಲ್ವರು ಅಸ್ವಸ್ಥರಾಗಿದ್ದರು. ಆದರೆ ಅಂಜುಶ್ರೀ ಮಾತ್ರ ದುರಂತ ಸಾವು ಕಂಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಅಂಜುಶ್ರೀ ಮತ್ತು ಆಕೆಯ ಸ್ನೇಹಿತರು ಡಿಸೆಂಬರ್ 31 ರಂದು ಉದುಮದ ಅಲ್ ರೊಮ್ಯಾನ್ಸಿಯಾ ಹೋಟೆಲ್ನಿಂದ ಕೇರಳದ ವಿಶೇಷ ಬಿರಿಯಾನಿ ಕುಜಿಮಂತಿಯನ್ನು ಆರ್ಡರ್ ಮಾಡಿದ್ದರು. ಆಕೆಯ ಸೋದರಿ ಅನುಶ್ರೀ ಪ್ರಕಾರ, ಅಂಜು ಸೇರಿ ನಾಲ್ಕು ಜನ ಬಿರಿಯಾನಿ ಸೇವಿಸಿದ್ದಾರೆ ಮತ್ತು ಅವರಲ್ಲಿ ಇಬ್ಬರಿಗೆ ತಕ್ಷಣ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಂಜುಶ್ರೀ ಅಸ್ವಸ್ಥಗೊಂಡಿದ್ದರಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ಬಳಿಕ ಆಕೆ ಮನೆಗೆ ಮರಳಿದ್ದಳು. ಆದರೆ, ಶುಕ್ರವಾರ ಬೆಳಗ್ಗೆ ಮತ್ತೆ ಪ್ರಜ್ಞಾಹೀನಳಾಗಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಿಸದೇ ಅಂಜು ಕೊನೆಯುಸಿರೆಳೆದಳು.
ಘಟನೆಗೆ ಸಂಬಂಧಿಸಿದಂತೆ ಅಲ್ ರೊಮ್ಯಾನ್ಸಿಯಾ ಹೋಟೆಲ್ ಮಾಲೀಕ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಹೊಟೇಲ್ಗೆ ಬೀಗ ಹಾಕಿ ಸೀಲ್ ಮಾಡಿದೆ. ಅಂಜು ಕುಟುಂಬ ನೀಡಿದ ದೂರಿನ ಮೇರೆಗೆ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಗ್ಗೆ ಕುತೂಹಲ ಮೂಡಿದ್ದು ಬಿರಿಯಾನಿಯಲ್ಲಿ ಏನಿದ್ದಿರಬಹುದು ಎಂಬ ಬಗ್ಗೆ ಕುತೂಹಲ ಇದೆ. ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.
Kerala Woman dies after eating Biryani, three including restaurant owner taken to custody.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm