ಬ್ರೇಕಿಂಗ್ ನ್ಯೂಸ್
09-01-23 12:43 pm HK News Desk ದೇಶ - ವಿದೇಶ
ಡಾಕರ್, ಜ. 9: ಭೀಕರ ಬಸ್ ಅಪಘಾತದಲ್ಲಿ 40 ಮಂದಿ ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡಿರುವ ದಾರುಣ ಘಟನೆ ಕೇಂದ್ರ ಸೆನೆಗಲ್ನಲ್ಲಿ ನಡೆದಿದೆ.
ಸಾರ್ವಜನಿಕ ಬಸ್ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಕನಿಷ್ಠ 78 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಮಾಹಿತಿ ನೀಡಿದ್ದಾರೆ.

ಕಾಫ್ರಿನ್ ಪ್ರದೇಶದ ಗ್ನಿವಿ ಗ್ರಾಮದಲ್ಲಿ ಮುಂಜಾನೆ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಅಧ್ಯಕ್ಷ ಮ್ಯಾಕಿ ಸಾಲ್ ಟ್ವೀಟ್ನಲ್ಲಿ ತಿಳಿಸಿದ್ದಾರೆ. “ಇಂದು ಗ್ನಿಬಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 40 ಜನರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಈ ದುರಂತ ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ಅವರಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗುವುದು” ಎಂದು ತಿಳಿಸಿದ್ದಾರೆ.

ಸೋಮವಾರದಿಂದ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದ ಅವರು, ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಲು ಸಭೆ ನಡೆಸುವುದಾಗಿ ಮ್ಯಾಕಿ ಸಾಲ್ ಹೇಳಿದ್ದಾರೆ. ಕಳಪೆ ಗುಣಮಟ್ಟದ ರಸ್ತೆಗಳು, ಚಾಲಕರು ನಿಯಮಗಳನ್ನು ಪಾಲಿಸದ ಕಾರಣ ಪಶ್ಚಿಮ ಆಫ್ರಿಕಾದ ರಾಷ್ಟ್ರದಲ್ಲಿ ಮೋಟಾರ್ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ.

2017ರಲ್ಲಿ, ಎರಡು ಬಸ್ಗಳು ಅಪಘಾತಕ್ಕೀಡಾಗಿ ಕನಿಷ್ಠ 25 ಜನರು ಸಾವನ್ನಪ್ಪಿದ್ದರು. ಅವರಲ್ಲಿ ಅನೇಕರು ತೀರ್ಥಯಾತ್ರೆಗಾಗಿ ಕೇಂದ್ರ ಪಟ್ಟಣವಾದ ತೌಬಾ ಕಡೆಗೆ ಹೋಗುತ್ತಿದ್ದರು.
At least 40 people were killed and dozens injured in a bus crash in central Senegal, the country’s president said Sunday. President Macky Sall tweeted that the collision happened in Gnivy village, in the Kaffrine region, at about 3:30 a.m. “I am deeply saddened by the tragic road accident today in Gniby causing 40 deaths and many serious injuries. I extend my heartfelt condolences to the families of the victims and wish a speedy recovery to the injured,” said Sall.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm