ಬ್ರೇಕಿಂಗ್ ನ್ಯೂಸ್
10-01-23 12:49 pm HK News Desk ದೇಶ - ವಿದೇಶ
ಕಾಸರಗೋಡು, ಜ.10: ಚಿಕನ್ ಬಿರಿಯಾನಿ ತಿಂದ ಬಳಿಕ ಫುಡ್ ಪಾಯ್ಸನಿಂಗ್ನಿಂದ ಕಾಸರಗೋಡು ಮೂಲದ ಅಂಜುಶ್ರೀ ಪಾರ್ವತಿ (19) ಮೃತಪಟ್ಟ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ ಅಂಜುಶ್ರೀ ಫುಡ್ ಪಾಯ್ಸನಿಂಗ್ನಿಂದ ಮೃತಪಟ್ಟಿಲ್ಲ.
ಬದಲಾಗಿ ಆಕೆಯ ದೇಹದಲ್ಲಿ ವಿಷದ ಕುರುಹುಗಳು ಸಹ ಪತ್ತೆಯಾಗಿದ್ದು, ವಿಷವು ಆಕೆಯ ಲಿವರ್ ಮೇಲೆ ಪರಿಣಾಮ ಬೀರಿ ಸಾವಿಗೀಡಾಗಿದ್ದಾಳೆ ಎಂಬ ಸ್ಫೋಟಕ ಸಂಗತಿ ಬಯಲಾಗಿದೆ.
ನಿನ್ನೆಯವರೆಗೂ ಅಂಜುಶ್ರೀ ಫುಡ್ ಪಾಯ್ಸನಿಂಗ್ನಿಂದ ಮೃತಪಟ್ಟಿದ್ದಾಳೆ ಎಂದೇ ನಂಬಲಾಗಿತ್ತು. ಪೇಸ್ಟ್ ರೂಪದಲ್ಲಿ ಇಲಿ ವಿಷವು ಅಂಜುಶ್ರೀ ದೇಹದಲ್ಲಿ ಪತ್ತೆಯಾಗಿರುವುದಾಗಿ ಶವ ಪರೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಾವಿಗೂ ಮುನ್ನ ಅಂಜುಶ್ರೀ ಗೂಗಲ್ನಲ್ಲಿ ಇಲಿ ಪಾಷಾಣಕ್ಕಾಗಿ ಹುಡುಕಾಟ ನಡೆಸಿರುವುದು ಮತ್ತು ಡೆತ್ನೋಟ್ ಸಹ ಮೊಬೈಲ್ನಲ್ಲಿ ಪತ್ತೆಯಾಗಿದೆ. ಆದಾಗ್ಯೂ ಕೆಮಿಕಲ್ ಪರೀಕ್ಷಾ ವರದಿ ಬಂದ ಬಳಿಕವಷ್ಟೇ ಇದು ಆತ್ಮಹತ್ಯೆಯೋ? ಅಥವಾ ಫುಡ್ ಪಾಯ್ಸನಿಂಗ್ನಿಂದ ಆದ ಸಾವೋ? ಎಂದು ಅಧಿಕೃತವಾಗಿ ಖಚಿತಪಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಅಂಜುಶ್ರೀ ಸಾವಿನ ಸುತ್ತ ಎಬ್ಬಿರುವ ನಿಗೂಢತೆಗೆ ಆದಷ್ಟು ಬೇಗ ತೆರೆ ಎಳೆಯಬೇಕೆಂದು ಆಕೆಯ ಕುಟುಂಬಸ್ಥರು ಒತ್ತಾಯ ಮಾಡಿದ್ದಾರೆ. ಆಹಾರ ಸೇವಿಸಿದ ಬಳಿಕ ಅಂಜುಶ್ರೀ ಸೇರಿದಂತೆ ಮೂವರಿಗೆ ದೈಹಿಕ ಅಸ್ವಸ್ಥತೆ ಉಂಟಾಗಿದೆ ಎಂದು ಯುವತಿಯ ಚಿಕ್ಕಪ್ಪ ಕರುಣಾಕರನ್ ತಿಳಿಸಿದ್ದಾರೆ. ಒಂದು ವೇಳೆ ಇದು ಫುಡ್ ಪಾಯ್ಸನಿಂಗ್ ಆಗದಿದ್ದರೆ ಸಾವಿಗೆ ಬೇರೆ ಕಾರಣಗಳನ್ನು ಪತ್ತೆ ಮಾಡಬೇಕು ಎಂದು ಸಂಬಂಧಿಕರು ಒತ್ತಾಯಿಸಿದ್ದಾರೆ.

ಕಾಸರಗೋಡಿನ ಚೆಮ್ನಾಡ್ ಗ್ರಾಮ ಪಂಚಾಯಿತಿಯ ತಳಕಳಾಯಿ ಗ್ರಾಮದ ಅಂಜುಶ್ರೀ, ಡಿಸೆಂಬರ್ 31 ರಂದು ಕಾಸರಗೋಡು ಪಟ್ಟಣದ ಅಡ್ಕತ್ಬೈಲ್ನಲ್ಲಿರುವ ಅಲ್ ರೊಮ್ಯಾನ್ಶಿಯಾ ರೆಸ್ಟೊರೆಂಟ್ನಲ್ಲಿ ಒಂದು ಫುಲ್ ಚಿಕನ್ 65, ಮಯೋನೈಸ್ ಮತ್ತು ಸಲಾಡ್ ಅನ್ನು ಆರ್ಡರ್ ಮಾಡಿದ್ದರು. ಮಧ್ಯಾಹ್ನದ ಊಟಕ್ಕೆ ಮನೆಗೆ ತಲುಪಿಸಿದ ಆಹಾರವನ್ನು ಅಂಜುಶ್ರೀ, ಆಕೆಯ ತಾಯಿ ಅಂಬಿಕಾ, ಸಹೋದರ ಶ್ರೀಕುಮಾರ್ (18) ಮತ್ತು ಸಂಬಂಧಿಕರಾದ ಶ್ರೀನಂದನ ಮತ್ತು ಸಹೋದರಿ ಅನುಶ್ರೀ ಸೇವಿಸಿದ್ದರು.
ಆಹಾರ ಸೇವಿಸಿದ ಅಂಜುಶ್ರೀ ಅಸ್ವಸ್ಥಗೊಂಡಿದ್ದಳು. ಬಳಿಕ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ಬಳಿಕ ಆಕೆ ಮನೆಗೆ ಮರಳಿದ್ದಳು. ಆದರೆ, ಶುಕ್ರವಾರ ಬೆಳಗ್ಗೆ ಮತ್ತೆ ಪ್ರಜ್ಞಾಹೀನಳಾಗಿ ಬಿದ್ದಿದ್ದ ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಆದಾಗ್ಯೂ, ಚಿಕಿತ್ಸೆ ಫಲಿಸದೇ ಅಂಜುಶ್ರೀ ಕೊನೆಯುಸಿರೆಳೆದಳು.
ವರ್ಷದೊಳಗೆ ಎರಡನೇ ಪ್ರಕರಣ: ಕಾಸರಗೋಡು ಜಿಲ್ಲೆಯಲ್ಲಿ ವಿಷಾಹಾರ ಸೇವಿಸಿ ಸಾವಿಗೀಡಾಗುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಕಳೆದ ಮೇ 1ರಂದು ಹೋಟೆಲ್ ಒಂದರಿಂದ ಶವರ್ಮ ಸೇವಿಸಿದ್ದ ಪ್ಲಸ್ಟು ವಿದ್ಯಾರ್ಥಿನಿ ಕರಿವೆಳ್ಳೂರು ನಿವಾಸಿ ದೇವನಂದಾ(17) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು. ಈ ಘಟನೆ ಕೇರಳಾದ್ಯಂತ ಭಾರಿ ಕೋಲಾಹಲಕ್ಕೆ ಕಾರಣವಾಗಿತ್ತು.
ಅಧಿಕಾರಿಗಳಿಂದ ದಾಳಿ: ಆಹಾರ ವಿತರಿಸಿದ ಅಡ್ಕತ್ತಬೈಲಿನ ಹೋಟೆಲ್ಗೆ ಆಹಾರ ಸುರಕ್ಷಾ ವಿಭಾಗದ ಕಾಸರಗೋಡು ಜಿಲ್ಲಾ ಸಹಾಯಕ ಆಯುಕ್ತರು ಹಾಗೂ ನಗರಸಭಾ ಆರೋಗ್ಯ ವಿಭಾಗದ ಅಧಿಕಾರಿಗಳ ತಂಡ ಶನಿವಾರ ದಾಳಿ ನಡೆಸಿ, ಹೋಟೆಲ್ಗೆ ಬೀಗ ಜಡಿದಿದ್ದಾರೆ.
Anjushree death after eating biryani, Postmortem report points to suicide, mobile search shows search for rat poision. The postmortem report of 19-year-old Anjushree Parvathy, who died here two days ago allegedly after taking kuzhimandhi, states rat poison led to her death.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm