ಬ್ರೇಕಿಂಗ್ ನ್ಯೂಸ್
12-01-23 01:28 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.12: ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಏಲಕ್ಕಿ ಹಾಕದ ʻಅರವಣ ಪಾಯಸಂʼ ತಯಾರಿಸಲು ತಿರುವಾಂಕೂರು ದೇವಸ್ವಂ ಬೋರ್ಡ್ ತೀರ್ಮಾನಿಸಿದೆ. ಏಲಕ್ಕಿಯಲ್ಲಿ ಮಿತಿಮೀರಿದ ಕೀಟನಾಶಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ಪ್ರಸಾದ ಅರವಣ ಪಾಯಸಕ್ಕೆ ವಿಶೇಷ ಮಹತ್ವ. ಆದರೆ ಇತ್ತೀಚೆಗೆ ಅರವಣ ಪಾಯಸದಲ್ಲಿ ಕೀಟನಾಶಕ ಬಳಸಿದ ಏಲಕ್ಕಿ ಬಳಸಿರುವುದು ಪತ್ತೆಯಾಗಿತ್ತು. ಹಾಗಾಗಿ ಆ ಸರದಿಯಲ್ಲಿ ತಯಾರಿಸಲ್ಪಟ್ಟ ಪ್ರಸಾದವನ್ನು ವಿತರಿಸದೇ ಇರುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ದೇವಸ್ವಂ ಬೋರ್ಡ್ ಏಲಕ್ಕಿ ಹಾಕದೇ ಪಾಯಸ ತಯಾರಿಸಲು ತೀರ್ಮಾನ ತೆಗೆದುಕೊಂಡಿದೆ.

ಅಲ್ಲದೆ, ಪ್ರಸಾದ ತಯಾರಿಸುವುದಕ್ಕು ಮುನ್ನ ಎಲ್ಲ ಯಂತ್ರಗಳನ್ನು ಸ್ವಚ್ಛಗೊಳಿಸಲಾಗುತ್ತದೆ. ಬಳಿಕ ತಾತ್ಕಾಲಿಕವಾಗಿ ಏಲಕ್ಕಿ ಹಾಕದೇ ಅರವಣ ಪಾಯಸಂ ತಯಾರಿಸಲಾಗುವುದು. ಗುರುವಾರದಿಂದ ಈ ಏಲಕ್ಕಿ ರಹಿತ ಅರವಣ ಪಾಯಸಂ ವಿತರಣೆ ಆಗಲಿದೆ. ಸಾವಯವ ಏಲಕ್ಕಿ ಖರೀದಿ ಪ್ರಕ್ರಿಯ ಚಾಲ್ತಿಯಲ್ಲಿದೆ ಎಂದು ದೇವಸ್ವಂ ಬೋರ್ಡ್ ಅಧ್ಯಕ್ಷ ಕೆ.ಅನಂತಗೋಪನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಿರುವನಂತಪುರದ ಆಹಾರ ಸುರಕ್ಷತಾ ಪ್ರಾಧಿಕಾರದ ಲ್ಯಾಬ್ ಮತ್ತು ಕೊಚ್ಚಿಯಲ್ಲಿರುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಲ್ಯಾಬ್ಗಳಲ್ಲಿ ಅರವಣ ಪ್ರಸಾದವನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಮಿತಿ ಮೀರಿದ ಕೀಟನಾಶಕದ ಅಂಶ ಪತ್ತೆಯಾಗಿತ್ತು. ಭಕ್ತರು ಅರವಣ ಪಾಯಸಂ ಗುಣಮಟ್ಟದ ಬಗ್ಗೆ ದೂರುಗಳನ್ನು ನೀಡಿದ್ದರಿಂದ ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಪರೀಕ್ಷೆಗಳನ್ನು ನಡೆಸಲಾಗಿತ್ತು. ಎರಡೂ ಲ್ಯಾಬ್ಗಳ ಪರೀಕ್ಷಾ ಫಲಿತಾಂಶವನ್ನು ಕೋರ್ಟ್ಗೆ ಸಲ್ಲಿಸಲಾಗಿತ್ತು. ಅದರಂತೆ ಪರೀಕ್ಷೆಗೆ ಒಡ್ಡಲಾದ ಪ್ರಸಾದವನ್ನು ವಿತರಣೆ ಮಾಡಬಾರದು ಎಂದು ಹೈಕೋರ್ಟ್ ದೇವಸ್ವಂ ಬೋರ್ಡ್ಗೆ ಸೂಚಿಸಿತ್ತು.
In view of a High Court order to stop immediately the distribution of aravana at Sabarimala temple, the Travancore Devaswom Board (TDB) is all set to commence the distribution of cardamom-less Aravana for sale at Sabarimala from Thursday onwards.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm