ಬ್ರೇಕಿಂಗ್ ನ್ಯೂಸ್
12-01-23 01:28 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.12: ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಏಲಕ್ಕಿ ಹಾಕದ ʻಅರವಣ ಪಾಯಸಂʼ ತಯಾರಿಸಲು ತಿರುವಾಂಕೂರು ದೇವಸ್ವಂ ಬೋರ್ಡ್ ತೀರ್ಮಾನಿಸಿದೆ. ಏಲಕ್ಕಿಯಲ್ಲಿ ಮಿತಿಮೀರಿದ ಕೀಟನಾಶಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ಪ್ರಸಾದ ಅರವಣ ಪಾಯಸಕ್ಕೆ ವಿಶೇಷ ಮಹತ್ವ. ಆದರೆ ಇತ್ತೀಚೆಗೆ ಅರವಣ ಪಾಯಸದಲ್ಲಿ ಕೀಟನಾಶಕ ಬಳಸಿದ ಏಲಕ್ಕಿ ಬಳಸಿರುವುದು ಪತ್ತೆಯಾಗಿತ್ತು. ಹಾಗಾಗಿ ಆ ಸರದಿಯಲ್ಲಿ ತಯಾರಿಸಲ್ಪಟ್ಟ ಪ್ರಸಾದವನ್ನು ವಿತರಿಸದೇ ಇರುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ದೇವಸ್ವಂ ಬೋರ್ಡ್ ಏಲಕ್ಕಿ ಹಾಕದೇ ಪಾಯಸ ತಯಾರಿಸಲು ತೀರ್ಮಾನ ತೆಗೆದುಕೊಂಡಿದೆ.

ಅಲ್ಲದೆ, ಪ್ರಸಾದ ತಯಾರಿಸುವುದಕ್ಕು ಮುನ್ನ ಎಲ್ಲ ಯಂತ್ರಗಳನ್ನು ಸ್ವಚ್ಛಗೊಳಿಸಲಾಗುತ್ತದೆ. ಬಳಿಕ ತಾತ್ಕಾಲಿಕವಾಗಿ ಏಲಕ್ಕಿ ಹಾಕದೇ ಅರವಣ ಪಾಯಸಂ ತಯಾರಿಸಲಾಗುವುದು. ಗುರುವಾರದಿಂದ ಈ ಏಲಕ್ಕಿ ರಹಿತ ಅರವಣ ಪಾಯಸಂ ವಿತರಣೆ ಆಗಲಿದೆ. ಸಾವಯವ ಏಲಕ್ಕಿ ಖರೀದಿ ಪ್ರಕ್ರಿಯ ಚಾಲ್ತಿಯಲ್ಲಿದೆ ಎಂದು ದೇವಸ್ವಂ ಬೋರ್ಡ್ ಅಧ್ಯಕ್ಷ ಕೆ.ಅನಂತಗೋಪನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಿರುವನಂತಪುರದ ಆಹಾರ ಸುರಕ್ಷತಾ ಪ್ರಾಧಿಕಾರದ ಲ್ಯಾಬ್ ಮತ್ತು ಕೊಚ್ಚಿಯಲ್ಲಿರುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಲ್ಯಾಬ್ಗಳಲ್ಲಿ ಅರವಣ ಪ್ರಸಾದವನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಮಿತಿ ಮೀರಿದ ಕೀಟನಾಶಕದ ಅಂಶ ಪತ್ತೆಯಾಗಿತ್ತು. ಭಕ್ತರು ಅರವಣ ಪಾಯಸಂ ಗುಣಮಟ್ಟದ ಬಗ್ಗೆ ದೂರುಗಳನ್ನು ನೀಡಿದ್ದರಿಂದ ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಪರೀಕ್ಷೆಗಳನ್ನು ನಡೆಸಲಾಗಿತ್ತು. ಎರಡೂ ಲ್ಯಾಬ್ಗಳ ಪರೀಕ್ಷಾ ಫಲಿತಾಂಶವನ್ನು ಕೋರ್ಟ್ಗೆ ಸಲ್ಲಿಸಲಾಗಿತ್ತು. ಅದರಂತೆ ಪರೀಕ್ಷೆಗೆ ಒಡ್ಡಲಾದ ಪ್ರಸಾದವನ್ನು ವಿತರಣೆ ಮಾಡಬಾರದು ಎಂದು ಹೈಕೋರ್ಟ್ ದೇವಸ್ವಂ ಬೋರ್ಡ್ಗೆ ಸೂಚಿಸಿತ್ತು.
In view of a High Court order to stop immediately the distribution of aravana at Sabarimala temple, the Travancore Devaswom Board (TDB) is all set to commence the distribution of cardamom-less Aravana for sale at Sabarimala from Thursday onwards.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm