ಬ್ರೇಕಿಂಗ್ ನ್ಯೂಸ್
12-01-23 01:28 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.12: ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಏಲಕ್ಕಿ ಹಾಕದ ʻಅರವಣ ಪಾಯಸಂʼ ತಯಾರಿಸಲು ತಿರುವಾಂಕೂರು ದೇವಸ್ವಂ ಬೋರ್ಡ್ ತೀರ್ಮಾನಿಸಿದೆ. ಏಲಕ್ಕಿಯಲ್ಲಿ ಮಿತಿಮೀರಿದ ಕೀಟನಾಶಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ಪ್ರಸಾದ ಅರವಣ ಪಾಯಸಕ್ಕೆ ವಿಶೇಷ ಮಹತ್ವ. ಆದರೆ ಇತ್ತೀಚೆಗೆ ಅರವಣ ಪಾಯಸದಲ್ಲಿ ಕೀಟನಾಶಕ ಬಳಸಿದ ಏಲಕ್ಕಿ ಬಳಸಿರುವುದು ಪತ್ತೆಯಾಗಿತ್ತು. ಹಾಗಾಗಿ ಆ ಸರದಿಯಲ್ಲಿ ತಯಾರಿಸಲ್ಪಟ್ಟ ಪ್ರಸಾದವನ್ನು ವಿತರಿಸದೇ ಇರುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ದೇವಸ್ವಂ ಬೋರ್ಡ್ ಏಲಕ್ಕಿ ಹಾಕದೇ ಪಾಯಸ ತಯಾರಿಸಲು ತೀರ್ಮಾನ ತೆಗೆದುಕೊಂಡಿದೆ.

ಅಲ್ಲದೆ, ಪ್ರಸಾದ ತಯಾರಿಸುವುದಕ್ಕು ಮುನ್ನ ಎಲ್ಲ ಯಂತ್ರಗಳನ್ನು ಸ್ವಚ್ಛಗೊಳಿಸಲಾಗುತ್ತದೆ. ಬಳಿಕ ತಾತ್ಕಾಲಿಕವಾಗಿ ಏಲಕ್ಕಿ ಹಾಕದೇ ಅರವಣ ಪಾಯಸಂ ತಯಾರಿಸಲಾಗುವುದು. ಗುರುವಾರದಿಂದ ಈ ಏಲಕ್ಕಿ ರಹಿತ ಅರವಣ ಪಾಯಸಂ ವಿತರಣೆ ಆಗಲಿದೆ. ಸಾವಯವ ಏಲಕ್ಕಿ ಖರೀದಿ ಪ್ರಕ್ರಿಯ ಚಾಲ್ತಿಯಲ್ಲಿದೆ ಎಂದು ದೇವಸ್ವಂ ಬೋರ್ಡ್ ಅಧ್ಯಕ್ಷ ಕೆ.ಅನಂತಗೋಪನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಿರುವನಂತಪುರದ ಆಹಾರ ಸುರಕ್ಷತಾ ಪ್ರಾಧಿಕಾರದ ಲ್ಯಾಬ್ ಮತ್ತು ಕೊಚ್ಚಿಯಲ್ಲಿರುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಲ್ಯಾಬ್ಗಳಲ್ಲಿ ಅರವಣ ಪ್ರಸಾದವನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಮಿತಿ ಮೀರಿದ ಕೀಟನಾಶಕದ ಅಂಶ ಪತ್ತೆಯಾಗಿತ್ತು. ಭಕ್ತರು ಅರವಣ ಪಾಯಸಂ ಗುಣಮಟ್ಟದ ಬಗ್ಗೆ ದೂರುಗಳನ್ನು ನೀಡಿದ್ದರಿಂದ ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಪರೀಕ್ಷೆಗಳನ್ನು ನಡೆಸಲಾಗಿತ್ತು. ಎರಡೂ ಲ್ಯಾಬ್ಗಳ ಪರೀಕ್ಷಾ ಫಲಿತಾಂಶವನ್ನು ಕೋರ್ಟ್ಗೆ ಸಲ್ಲಿಸಲಾಗಿತ್ತು. ಅದರಂತೆ ಪರೀಕ್ಷೆಗೆ ಒಡ್ಡಲಾದ ಪ್ರಸಾದವನ್ನು ವಿತರಣೆ ಮಾಡಬಾರದು ಎಂದು ಹೈಕೋರ್ಟ್ ದೇವಸ್ವಂ ಬೋರ್ಡ್ಗೆ ಸೂಚಿಸಿತ್ತು.
In view of a High Court order to stop immediately the distribution of aravana at Sabarimala temple, the Travancore Devaswom Board (TDB) is all set to commence the distribution of cardamom-less Aravana for sale at Sabarimala from Thursday onwards.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm