ಬ್ರೇಕಿಂಗ್ ನ್ಯೂಸ್
14-01-23 08:00 pm HK News Desk ದೇಶ - ವಿದೇಶ
ನವದೆಹಲಿ, ಜ.14 : ತನ್ನ ಸಹಜೀವನ ಸಂಗಾತಿ ಶ್ರದ್ಧಾ ವಾಲಕರ್ ಅವರನ್ನು ಹತ್ಯೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ದೆಹಲಿಯ ವಿವಿಧೆಡೆ ಎಸೆದಿದ್ದ ಆರೋಪ ಎದುರಿಸುತ್ತಿರುವ ಆಫ್ತಾಬ್ ಅಮೀನ್ ಪೂನಾವಾಲಾ ಪ್ರಕರಣದ ತನಿಖೆ ಮುಂದುವರಿದಂತೆ ಆಘಾತಕಾರಿ ಸಂಗತಿಗಳು ಹೊರಬೀಳುತ್ತಿವೆ.
ಶ್ರದ್ಧಾ ವಾಲಕರ್ ಅವರ ದೇಹವನ್ನು ಗರಗಸ ಬಳಸಿ ತುಂಡರಿಸಿರುವುದು ಮೂಳೆಗಳ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು 'ಇಂಡಿಯಾ ಟುಡೆ' ವರದಿ ಮಾಡಿದೆ.
ದೆಹಲಿಯ ವಿವಿಧೆಡೆ ಸಂಗ್ರಹಿಸಿದ್ದ ಶ್ರದ್ಧಾ ವಾಲಕರ್ ಅವರ 23 ಮೂಳೆಗಳನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಏಮ್ಸ್ ಆಸ್ಪತ್ರೆಗೆ ಕಳುಹಿಸಿದ್ದರು. ಗರಗಸ ಬಳಸಿ ತುಂಡರಿಸಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಜನವರಿ ಕೊನೆಯ ವಾರದಲ್ಲಿ ಪ್ರಕರಣ ಕುರಿತಂತೆ ಪೊಲೀಸರು ದೆಹಲಿಯ ಸಾಕೆತ್ ಕೋರ್ಟ್ಗೆ ದೋಷಾರೋಪಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ.
ಶ್ರದ್ಧಾ ವಾಲಕರ್ ತಂದೆಯ ಡಿಎನ್ಎ ಜೊತೆ ದಕ್ಷಿಣ ದೆಹಲಿಯ ಅರಣ್ಯ ಪ್ರದೇಶದಲ್ಲಿ ಸಿಕ್ಕ ಮೂಳೆಗಳ ಡಿಎನ್ಎ ಹೊಂದಿಕೆಯಾದ ಹಿನ್ನೆಲೆಯಲ್ಲಿ ಆಟೊಪ್ಸಿ(ಮೂಳೆಗಳ ಪರೀಕ್ಷೆ) ನಡೆಸಲಾಯಿತು ಎಂದು ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ ತಿಳಿಸಿದೆ.
ಆರೋಪಿ ಆಫ್ತಾಬ್ನ ಪಾಲಿಗ್ರಾಫ್ ಮತ್ತು ನಾರ್ಕೊ ಪರೀಕ್ಷೆಯ ವರದಿಯನ್ನು ದೆಹಲಿ ಪೊಲೀಸರು ಪಡೆದುಕೊಂಡಿದ್ದಾರೆ.
ಮೇ 18, 2022ರಂದು ಶ್ರದ್ಧಾಳನ್ನು ಉಸಿರುಗಟ್ಟಿಸಿ ಕೊಂದಿದ್ದ ಆಫ್ತಾಬ್, ಆಕೆಯ ಮೃತದೇಹಗಳನ್ನು 35 ತುಂಡಾಗಳಾಗಿ ಕತ್ತರಿಸಿ ದಕ್ಷಿಣ ದೆಹಲಿಯ ಮಹ್ರೌಲಿಯಲ್ಲಿರುವ ತಮ್ಮ ನಿವಾಸದಲ್ಲಿ ಸುಮಾರು ಮೂರು ವಾರಗಳ ಕಾಲ 300 ಲೀಟರ್ ಸಾಮರ್ಥ್ಯದ ಫ್ರಿಡ್ಜ್ನಲ್ಲಿ ಇಟ್ಟಿದ್ದ. ಬಳಿಕ ಅದನ್ನು ತೆಗೆದು, ದೆಹಲಿ ಮತ್ತು ಗುರುಗ್ರಾಮದ ಹಲವೆಡೆ ಎಸೆದು ಬಂದಿದ್ದ. ನವೆಂಬರ್ 12ರಂದು ಪೊಲೀಸರು ಆತನನ್ನು ಬಂಧಿಸಿದ್ದರು.
who murdered his live-in partner Shraddha Walkar in May last year, had used a saw to chop the woman’s body into pieces, an autopsy of her bones has revealed. Delhi Police handed over 23 recovered bones for a postmortem analysis which was conducted at AIIMS on Tuesday. Delhi Police is likely to file a chargesheet in the case at Saket court by the last week of January, sources said.
18-07-25 07:11 pm
Bangalore Correspondent
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm