ಬ್ರೇಕಿಂಗ್ ನ್ಯೂಸ್
19-01-23 06:03 pm HK News Desk ದೇಶ - ವಿದೇಶ
ನವದೆಹಲಿ, ಜ.19: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಆರೋಪಿ ಶಂಕರ್ ಮಿಶ್ರಾಗೆ ವಿಮಾನ ಪ್ರಯಾಣದಿಂದ 4 ತಿಂಗಳು ನಿಷೇಧಿಸಿ ಏರ್ ಇಂಡಿಯಾ ಕಂಪನಿ ಆದೇಶಿಸಿದೆ.
ಈ ಕುರಿತು ಎಎನ್ಐ ಟ್ವೀಟ್ ಮಾಡಿದೆ. ಶಂಕರ್ ಮಿಶ್ರಾ ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ 4 ತಿಂಗಳುವರೆಗೆ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿದೆ.
2022ರ ನವೆಂಬರ್ 26 ರಂದು, ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ ಕುಡಿದ ಮತ್ತಿನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ. ವಿಮಾನ ಲ್ಯಾಂಡ್ ಆದ ನಂತರವೂ ಮಿಶ್ರಾ ವಿರುದ್ಧ ಯಾವುದೇ ಕ್ರಮ ಜರುಗಿಸಿರಲಿಲ್ಲ. ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಬ್ಯುಸಿನೆಸ್ ಕ್ಲಾಸ್ನಲ್ಲಿ ಈ ಘಟನೆ ನಡೆದಿತ್ತು.

ಮಹಿಳೆ ಏರ್ ಇಂಡಿಯಾಗೆ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಈತನ ವಿರುದ್ಧ ಜನವರಿ 4ರಂದು ಎಫ್ಐಆರ್ ದಾಖಲಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಮಿಶ್ರಾನನ್ನು ಬಂಧಿಸಿ ದೆಹಲಿಗೆ ಕರೆತರಲಾಗಿತ್ತು.
ಜ.7 ರಂದು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಪಟಿಯಾಲಾ ಹೌಸ್ ಕೋರ್ಟ್ ನ್ಯಾಯಾಧೀಶರು, ಇದೊಂದು ಅತ್ಯಂತ ಅಸಹ್ಯಕರ ಘಟನೆ ಎಂದು ಖಂಡಿಸಿತ್ತು.
Air India passenger urinating incident of Nov 26, 2022 | Shankar Mishra banned for four months by Air India: Air India official to ANI pic.twitter.com/9Gba5YcD8h
— ANI (@ANI) January 19, 2023
Airline carrier Air India has banned Shankar Mishra, accused of urinating on a co-passenger onboard a New York-Delhi flight last November, from flying for four months, news agency PTI reported citing an official. Earlier, Air India had announced a ban of 30 days on Mishra after the incident came to light.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm