ಬ್ರೇಕಿಂಗ್ ನ್ಯೂಸ್
28-01-23 05:47 pm HK News Desk ದೇಶ - ವಿದೇಶ
ನವದೆಹಲಿ, ಜ.28: ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಮುಖ್ಯ ಭೂಮಿಕೆಯಲ್ಲಿರುವ ಹಿಂದಿಯ ಪಠಾಣ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಮೂರೇ ದಿನಗಳಲ್ಲಿ 313 ಕೋಟಿ ಗಳಿಕೆ ಕಂಡಿದೆ.
ಜನವರಿ 25ರಂದು ತೆರೆ ಕಂಡ ಚಿತ್ರ ಮೂರನೇ ದಿನ ಹಿಂದಿಯಲ್ಲಿ ₹38 ಕೋಟಿ ನಿವ್ವಳ ಗಳಿಕೆ ಕಂಡಿದೆ. ಇತರೆ ಭಾಷೆಗಳಲ್ಲಿ ₹1.25 ಕೋಟಿ ಗಳಿಸಿದೆ ಎಂದು ಚಿತ್ರ ನಿರ್ಮಾಣ ಮಾಡಿರುವ ಯಶ್ ರಾಜ್ ಫಿಲ್ಮ್ಸ್ ತಿಳಿಸಿದೆ.

ಮೂರನೇ ದಿನ ಚಿತ್ರವು ಭಾರತದಲ್ಲಿ ₹39.25 ನಿವ್ವಳ ಗಳಿಕೆ (ಒಟ್ಟು ₹47ಕೋಟಿ) ಕಂಡಿದ್ದು, ವಿದೇಶದಲ್ಲಿ ಒಟ್ಟು ₹43 ಕೋಟಿ ಗಳಿಸಿದೆ. ಒಟ್ಟಾರೆ ವಿಶ್ವದಾದ್ಯಂತ ಮೂರನೇ ದಿನದ ಗಳಿಕೆ ₹90 ಕೋಟಿ ಆಗಿದೆ’ ಎಂದು ಸಂಸ್ಥೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
4 ವರ್ಷಗಳ ದೀರ್ಘ ವಿರಾಮದ ಬಳಿಕ ತೆರೆ ಕಂಡಿರುವ ಶಾರುಖ್ ಖಾನ್ ಅವರ ಚಿತ್ರ ಮೊದಲ ದಿನವೇ ವಿಶ್ವದಾದ್ಯಂತ ₹106 ಕೋಟಿ ಗಳಿಸಿತ್ತು. ಎರಡನೇ ದಿನ ₹113.6 ಕೋಟಿ ಮತ್ತು ಮೂರನೇ ದಿನ ₹90 ಕೋಟಿ ಗಳಿಸಿದೆ.

ಮೂರು ದಿನಗಳ ಬಳಿಕ ಚಿತ್ರ ಭಾರತದಲ್ಲಿ ₹201 ಕೋಟಿ ಮತ್ತು ವಿದೇಶದಲ್ಲಿ ₹112 ಕೊಟಿ ಗಳಿಕೆ ಕಂಡಿದೆ. ಪಠಾಣ್ ಚಿತ್ರವು ಮೊದಲ ದಿನ ಭಾರತ ಮತ್ತು ವಿದೇಶದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
‘ಪಠಾಣ್ ಚಿತ್ರವನ್ನು ವಿಶ್ವದಾದ್ಯಂತ ಇರುವ ಭಾರತೀಯರು ಆಶೀರ್ವದಿಸಿದ್ದಾರೆ. ಚಿತ್ರ ಮುನ್ನುಗ್ಗುತ್ತಿರುವ ಪರಿ ಅಭೂತಪೂರ್ವ ಮತ್ತು ಐತಿಹಾಸಿಕವಾದದ್ದು’ಎಂದು ಯಶ್ ರಾಜ್ ಫಿಲ್ಮ್ಸ್ ಸಿಇಒ ಅಕ್ಷಯೆ ವಿಧಾನಿ ಹೇಳಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ಪ್ರಕಾರ, ಪಠಾಣ್ ಚಿತ್ರವು 21 ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಚಿತ್ರದಲ್ಲಿ ಸಲ್ಮಾನ್ ಖಾನ್, ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Bollywood superstar Shah Rukh Khan made a grand comeback to the big screen with 'Pathaan', which has minted a whopping Rs 313 crore in worldwide gross earnings in three days, movie critic Taran Adarsh said on Saturday 'Pathaan' marks SRK's comeback in a lead role after five years. He last played the lead in 'Zero' in 2018, which turned out to be a massive failure at the box office.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm