ಬ್ರೇಕಿಂಗ್ ನ್ಯೂಸ್
28-01-23 05:47 pm HK News Desk ದೇಶ - ವಿದೇಶ
ನವದೆಹಲಿ, ಜ.28: ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಮುಖ್ಯ ಭೂಮಿಕೆಯಲ್ಲಿರುವ ಹಿಂದಿಯ ಪಠಾಣ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಮೂರೇ ದಿನಗಳಲ್ಲಿ 313 ಕೋಟಿ ಗಳಿಕೆ ಕಂಡಿದೆ.
ಜನವರಿ 25ರಂದು ತೆರೆ ಕಂಡ ಚಿತ್ರ ಮೂರನೇ ದಿನ ಹಿಂದಿಯಲ್ಲಿ ₹38 ಕೋಟಿ ನಿವ್ವಳ ಗಳಿಕೆ ಕಂಡಿದೆ. ಇತರೆ ಭಾಷೆಗಳಲ್ಲಿ ₹1.25 ಕೋಟಿ ಗಳಿಸಿದೆ ಎಂದು ಚಿತ್ರ ನಿರ್ಮಾಣ ಮಾಡಿರುವ ಯಶ್ ರಾಜ್ ಫಿಲ್ಮ್ಸ್ ತಿಳಿಸಿದೆ.

ಮೂರನೇ ದಿನ ಚಿತ್ರವು ಭಾರತದಲ್ಲಿ ₹39.25 ನಿವ್ವಳ ಗಳಿಕೆ (ಒಟ್ಟು ₹47ಕೋಟಿ) ಕಂಡಿದ್ದು, ವಿದೇಶದಲ್ಲಿ ಒಟ್ಟು ₹43 ಕೋಟಿ ಗಳಿಸಿದೆ. ಒಟ್ಟಾರೆ ವಿಶ್ವದಾದ್ಯಂತ ಮೂರನೇ ದಿನದ ಗಳಿಕೆ ₹90 ಕೋಟಿ ಆಗಿದೆ’ ಎಂದು ಸಂಸ್ಥೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
4 ವರ್ಷಗಳ ದೀರ್ಘ ವಿರಾಮದ ಬಳಿಕ ತೆರೆ ಕಂಡಿರುವ ಶಾರುಖ್ ಖಾನ್ ಅವರ ಚಿತ್ರ ಮೊದಲ ದಿನವೇ ವಿಶ್ವದಾದ್ಯಂತ ₹106 ಕೋಟಿ ಗಳಿಸಿತ್ತು. ಎರಡನೇ ದಿನ ₹113.6 ಕೋಟಿ ಮತ್ತು ಮೂರನೇ ದಿನ ₹90 ಕೋಟಿ ಗಳಿಸಿದೆ.

ಮೂರು ದಿನಗಳ ಬಳಿಕ ಚಿತ್ರ ಭಾರತದಲ್ಲಿ ₹201 ಕೋಟಿ ಮತ್ತು ವಿದೇಶದಲ್ಲಿ ₹112 ಕೊಟಿ ಗಳಿಕೆ ಕಂಡಿದೆ. ಪಠಾಣ್ ಚಿತ್ರವು ಮೊದಲ ದಿನ ಭಾರತ ಮತ್ತು ವಿದೇಶದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
‘ಪಠಾಣ್ ಚಿತ್ರವನ್ನು ವಿಶ್ವದಾದ್ಯಂತ ಇರುವ ಭಾರತೀಯರು ಆಶೀರ್ವದಿಸಿದ್ದಾರೆ. ಚಿತ್ರ ಮುನ್ನುಗ್ಗುತ್ತಿರುವ ಪರಿ ಅಭೂತಪೂರ್ವ ಮತ್ತು ಐತಿಹಾಸಿಕವಾದದ್ದು’ಎಂದು ಯಶ್ ರಾಜ್ ಫಿಲ್ಮ್ಸ್ ಸಿಇಒ ಅಕ್ಷಯೆ ವಿಧಾನಿ ಹೇಳಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ಪ್ರಕಾರ, ಪಠಾಣ್ ಚಿತ್ರವು 21 ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಚಿತ್ರದಲ್ಲಿ ಸಲ್ಮಾನ್ ಖಾನ್, ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Bollywood superstar Shah Rukh Khan made a grand comeback to the big screen with 'Pathaan', which has minted a whopping Rs 313 crore in worldwide gross earnings in three days, movie critic Taran Adarsh said on Saturday 'Pathaan' marks SRK's comeback in a lead role after five years. He last played the lead in 'Zero' in 2018, which turned out to be a massive failure at the box office.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm