ಬ್ರೇಕಿಂಗ್ ನ್ಯೂಸ್
28-01-23 10:20 pm HK News Desk ದೇಶ - ವಿದೇಶ
ಮುಂಬೈ, ಜ.28: ಮುಂದಿನ ಚುನಾವಣೆಯ ಬಳಿಕ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವುದಿಲ್ಲ. ಕರ್ನಾಟಕ ಬಿಜೆಪಿಯಿಂದ ಕೈತಪ್ಪಲಿದೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಬಿಜೆಪಿ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರೋದಿಲ್ಲ ಅನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ನಾವು ವಿರೋಧಿ ಪಕ್ಷಗಳನ್ನೆಲ್ಲ ಒಟ್ಟು ಸೇರಿಸಲು ಪ್ರಯತ್ನ ಪಡುತ್ತಿದ್ದೇವೆ. ಲೋಕಸಭೆ ಚುನಾವಣೆಗೂ ಮೊದಲು ಒಕ್ಕೂಟವನ್ನು ಬಲಗೊಳಿಸುತ್ತೇವೆ. ಆದರೆ ಎಲ್ಲ ರಾಜ್ಯಗಳಲ್ಲೂ ಆಯಾ ಭಾಗದಲ್ಲಿನ ವಿಚಾರಗಳೇ ಚುನಾವಣೆಗೆ ಮುಖ್ಯವಾಗುತ್ತದೆ. ಅದನ್ನು ಮತವಾಗಿ ಪರಿವರ್ತನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇತ್ತೀಚಿನ ಕೆಲವು ಸಮೀಕ್ಷೆಗಳಲ್ಲಿ ಸಾರ್ವಜನಿಕ ಅಭಿಪ್ರಾಯ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಜನಾಭಿಪ್ರಾಯ ಬದಲಾಗುತ್ತಿರುವುದನ್ನು ಕಂಡಿದ್ದೇವೆ. ಜನರು ಬಹಿರಂಗವಾಗಿಯೇ ಬಿಜೆಪಿ ವಿರುದ್ಧ ಅಭಿಪ್ರಾಯ ಹೇಳುತ್ತಿದ್ದಾರೆ. ಈ ಅಭಿಪ್ರಾಯಗಳೇ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ. ಜನರು ಧಾರ್ಮಿಕ ವಿಚಾರಗಳಿಗೆ ಹೆಚ್ಚು ಕಾಲ ಮತ ಕೊಡಲ್ಲ. ಜನರನ್ನು ಮತದ ಆಧಾರದಲ್ಲಿ ಒಡೆಯುವುದು ಭವಿಷ್ಯದಲ್ಲಿ ವರ್ಕೌಟ್ ಆಗಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ.

ಭಾರತ್ ಜೋಡೊ ಯಾತ್ರೆಯಿಂದ ರಾಹುಲ್ ಗಾಂಧಿ ವ್ಯಕ್ತಿಗತ ಲಾಭ ಆಗಿದೆಯೇ ಎಂಬ ಪ್ರಶ್ನೆಗೆ, ಜನಸಾಮಾನ್ಯರಿಂದಲೂ ರಾಹುಲ್ ಪರವಾಗಿ ಸ್ಪಂದನೆ ವ್ಯಕ್ತವಾಗುತ್ತಿದೆ. ರಾಹುಲ್ ಬಗ್ಗೆ ವ್ಯಕ್ತಿತ್ವ ಹನನದ ಮಧ್ಯೆಯೂ ದೇಶಾದ್ಯಂತ ಬೆಂಬಲ ವ್ಯಕ್ತವಾಗುತ್ತಿರುವುದು ಹೊಸ ಬೆಳವಣಿಗೆ ಎಂದರು. ಗುಜರಾತ್ ದಂಗೆಯ ಕುರಿತ ಬಿಬಿಸಿ ಡಾಕ್ಯುಮೆಂಟರಿ ನಿಷೇಧಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಟೀಕಿಸಿದ ಪವಾರ್, ಅದು ಪ್ರಜಾಪ್ರಭುತ್ವದ ಕೊಲೆ. ಅದನ್ನು ನಿರಾಕರಿಸಲಾಗದು ಎಂದಿದ್ದಾರೆ.
Karnataka is slipping out of the ruling BJP’s control and may see a change of power after the next Assembly elections, Nationalist Congress Party (NCP) President Sharad Pawar said here on Saturday. “There are clear indications that the BJP will not retain power in Karnataka after the upcoming state electionsa We are making attempts to unite the Opposition parties and forge a united front, but all states have different local issues which need to be tackled," said Pawar.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm