ಬ್ರೇಕಿಂಗ್ ನ್ಯೂಸ್
30-01-23 10:08 pm HK News Desk ದೇಶ - ವಿದೇಶ
ಲಕ್ನೋ, ಜ.30: ಉತ್ತರ ಪ್ರದೇಶದ ಗೋರಖನಾಥ ಮಂದಿರದ ಭದ್ರತಾ ಸಿಬಂದಿ ಮೇಲೆ ದಾಳಿ ಮಾಡಿದ್ದ ಅಹ್ಮದ್ ಮುರ್ತಜಾ ಅಬ್ಬಾಸಿಗೆ ಎನ್ಐಎ ವಿಶೇಷ ಕೋರ್ಟ್ ಮರಣ ದಂಡನೆ ಶಿಕ್ಷೆ ವಿಧಿಸಿದೆ.
ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಪ್ರಶಾಂತ್ ಕುಮಾರ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಆರೋಪಿಗೆ ಐಪಿಸಿ 121 ಪ್ರಕಾರ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಪೊಲೀಸ್ ಸಿಬಂದಿಗೆ ಹಲ್ಲೆ ಮಾಡಿದ್ದಕ್ಕಾಗಿ ಐಪಿಸಿ 307 ಅಡಿ ಜೀವಾವಧಿ ಶಿಕ್ಷೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಗೋರಖನಾಥ ಮಂದಿರದಲ್ಲಿ ಭದ್ರತೆ ನೋಡಿಕೊಂಡಿದ್ದ ಸಶಸ್ತ್ರ ದಳದ ಸಿಬಂದಿಗೆ ಕಳೆದ ಎಪ್ರಿಲ್ ತಿಂಗಳಲ್ಲಿ ಕೈಯಲ್ಲಿ ಹರಿತ ಆಯುಧ ಇಟ್ಟುಕೊಂಡಿದ್ದ ಮುರ್ತಜಾ ಅಬ್ಬಾಸಿ ದಾಳಿ ನಡೆಸಿದ್ದ. ಆನಂತರ, ಭದ್ರತಾ ಸಿಬಂದಿ ಬೆನ್ನಟ್ಟಿ ಹಿಡಿದಿದ್ದರು. ಮುರ್ತಜಾ ಅಬ್ಬಾಸಿ ಕೆಮಿಕಲ್ ಇಂಜಿನಿಯರ್ ಪದವೀಧರನಾಗಿದ್ದು, ವಿಚಾರಣೆ ವೇಳೆ ಆತನಿಗೆ ಸಿರಿಯಾದ ಐಸಿಸ್ ಸಂಪರ್ಕ ಇರುವುದು ಪತ್ತೆಯಾಗಿತ್ತು. ಐಸಿಸ್ ಪರವಾಗಿ ಹೋರಾಡಲು ಹಣಕಾಸು ನೆರವನ್ನೂ ಪಡೆಯುತ್ತಿದ್ದ ಎನ್ನುವುದು ತಿಳಿದುಬಂದಿತ್ತು.
2015ರಲ್ಲಿ ಮುಂಬೈ ಐಐಟಿಯಲ್ಲಿ ಇಂಜಿನಿಯರಿಂಗ್ ಪೂರೈಸಿದ್ದ ಅಹ್ಮದ್ ಮುರ್ತಜಾ ಎರಡು ಕಂಪನಿಗಳಲ್ಲಿ ಕೆಲಸ ಮಾಡಿದ್ದ. ಆನಂತರ, 2017ರಲ್ಲಿ ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದ್ದ ಮುರ್ತಜಾಗೆ ಹಲವು ಡಾಕ್ಟರ್ ಗಳಿಗೆ ತೋರಿಸಿ ಚಿಕಿತ್ಸೆ ನೀಡಲಾಗಿತ್ತು ಎಂದು ಆತನ ಕುಟುಂಬಸ್ಥರು ತಿಳಿಸಿದ್ದರು. ಮದುವೆಯಾಗಿದ್ದರೂ, ಮಾನಸಿಕ ಅಸ್ವಸ್ಥನೆಂಬ ಕಾರಣಕ್ಕೆ ಪತ್ನಿ ಬಿಟ್ಟು ಹೋಗಿದ್ದಳು. 2022ರ ಎಪ್ರಿಲ್ ನಲ್ಲಿ ಗೋರಖನಾಥ ಮಂದಿರಕ್ಕೆ ಬಂದಿದ್ದ ಅಲ್ಲಿನ ಅರ್ಚಕನಿಗೆ ಹಲ್ಲೆ ಮಾಡಲೆಂದು ಒಳಗೆ ತೆರಳುತ್ತಿದ್ದಾಗಲೇ ಭದ್ರತಾ ಸಿಬಂದಿ ತಡೆದಿದ್ದು, ತನ್ನಲ್ಲಿದ್ದ ಚೂರಿಯಿಂದ ಅವರ ಮೇಲೆಯೇ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿದ್ದ.
An NIA court on Monday, January 30, sentenced Gorakhnath Temple attack accused Ahmed Murtaza Abbasi to death, after 60 days of continuous hearing. The NIA and Uttar Pradesh Anti-Terrorism Squad (ATS) completed the investigation of the case within 9 months and Abbasi was found guilty under the provisions of the Unlawful Activities (Prevention) Act and convicted for waging a war against the nation on Saturday.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm