ಬ್ರೇಕಿಂಗ್ ನ್ಯೂಸ್
31-01-23 01:21 pm HK News Desk ದೇಶ - ವಿದೇಶ
ಮುಂಬೈ, ಜ.31: ಅಬುಧಾಬಿಯಿಂದ ಮುಂಬೈಗೆ ಸೋಮವಾರ ಬಂದಿಳಿದ ವಿಸ್ತಾರ ಏರ್ಲೈನ್ಸ್ ವಿಮಾನದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅರೆ ಬೆತ್ತಲಾಗಿ ಓಡಾಡಿದ ಇಟಲಿಯ ಮಹಿಳೆಯೊಬ್ಬರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ವಿಮಾನದಲ್ಲಿ ಗದ್ದಲ ಸೃಷ್ಟಿಸಿದ ಮಹಿಳೆಯನ್ನು ಪೌಲಾ ಪೆರ್ರುಸಿಯೊ ಎಂದು ಗುರುತಿಸಲಾಗಿದೆ. ಎಕಾನಮಿ ಕ್ಲಾಸ್ ಟಿಕೆಟ್ ಖರೀದಿಸಿ ಬ್ಯುಸಿನೆಸ್ ಕ್ಲಾಸ್ನಲ್ಲಿ ಕುಳಿತುಕೊಳ್ಳಲು ಹಠ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ತಾವು ಧರಿಸಿದ್ದ ಬಟ್ಟೆಗಳನ್ನು ತೆಗೆದು ಅರೆ ಬೆತ್ತಲಾಗಿ ಓಡಾಡಿದ್ದಾರೆ ಎಂದು ವರದಿಯಾಗಿದೆ.
ಸಂಸ್ಥೆಯ ಏರ್ ವಿಸ್ತಾರ ಯುಕೆ–256 ವಿಮಾನದಲ್ಲಿದ್ದ ಸಿಬ್ಬಂದಿ ನೀಡಿದ ದೂರಿನಂತೆ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಹಿಳೆ ಕುಡಿದ ಮತ್ತಿನಲ್ಲಿದ್ದರು ಎಂದು ವಿಮಾನ ನಿಲ್ದಾಣದ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಜನವರಿ 30ರ ತಡರಾತ್ರಿ 2:03ಕ್ಕೆ ಅಬುಧಾಬಿಯಿಂದ ಹೊರಟಿದ್ದ ವಿಮಾನವು ಬೆಳಗಿನ ಜಾವ ಮುಂಬೈಗೆ ಬಂದಿಳಿದಿತ್ತು.
2023ರ ಜನವರಿ 30ರಂದು ಅಬುಧಾಬಿಯಿಂದ ಮುಂಬೈಗೆ ಸಂಚರಿಸುತ್ತಿದ್ದ ವಿಸ್ತಾರ ಯುಕೆ–256 ವಿಮಾನದಲ್ಲಿದ್ದ ಮಹಿಳೆ ಅಶಿಸ್ತು ತೋರಿದ್ದಾರೆ ಎಂಬುದನ್ನು ಖಚಿತಪಡಿಸುತ್ತಿದ್ದೇವೆ. ಅಶಿಸ್ತು ಮತ್ತು ಹಿಂಸಾ ಕೃತ್ಯ ನಡೆಸಿದ್ದನ್ನು ಗಮನದಲ್ಲಿರಿಸಿ, ಎಚ್ಚರಿಕೆಯ ಕಾರ್ಡ್ ನೀಡಲು ಹಾಗೂ ಮಹಿಳೆಯನ್ನು ನಿರ್ಬಂಧಿಸಲು ವಿಮಾನದ ಕ್ಯಾಪ್ಟನ್ ನಿರ್ಧರಿಸಿದರು' ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
ಇತರ ಪ್ರಯಾಣಿಕರ ಸುರಕ್ಷತೆ ಹಾಗೂ ಭದ್ರತೆಯನ್ನು ಖಾತ್ರಿಪಡಿಸಲು ಪೈಲಟ್ ನಿಯಮಿತವಾಗಿ ಪ್ರಕಟಣೆಗಳನ್ನು ನೀಡಿದ್ದಾರೆ. ಮಾರ್ಗಸೂಚಿ ಹಾಗೂ ನಮ್ಮ ಕಟ್ಟುನಿಟ್ಟಿನ ಕಾರ್ಯಾಚರಣೆ ವಿಧಾನಕ್ಕೆ ಅನುಸಾರವಾಗಿ, ವಿಮಾನವು ಬಂದಿಳಿಯುತ್ತಿದ್ದಂತೆಯೇ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿಲ್ದಾಣದಲ್ಲಿನ ಭದ್ರತಾ ಏಜೆನ್ಸಿಗಳಿಗೆ ತಿಳಿಸಲಾಗಿತ್ತು' ಎಂದೂ ವಕ್ತಾರರು ಮಾಹಿತಿ ನೀಡಿದ್ದಾರೆ.
An Italian woman was arrested for assaulting crew members on board an Abu Dhabi-Mumbai Vistara flight on Monday, January 30. According to reports, the woman — Paula Perrucio (45) — had a ticket for an economy seat, but was sitting in business class. When the crew members objected, she allegedly slapped one of them and spat on the other, and purportedly began removing her clothes. The Mumbai police arrested her early on Monday based on a complaint by a fellow passenger.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm