ಬ್ರೇಕಿಂಗ್ ನ್ಯೂಸ್
02-02-23 04:52 pm HK News Desk ದೇಶ - ವಿದೇಶ
ಕೇರಳ, ಫೆ.2: ಸಂಚರಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಗರ್ಭಿಣಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ಕಣ್ಣೂರಿನಲ್ಲಿ ಗುರುವಾರ ನಡೆದಿದೆ.
ಕಾರಿನಲ್ಲಿದ್ದ 6 ಜನರ ಪೈಕಿ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡೋರ್ ಜಾಮ್ ಆಗಿ ಮುಂದೆ ಇದ್ದವರು ಹೊರಬರಲಾರದೇ ಸಾವನ್ನಪ್ಪಿದ್ದಾರೆ.
ಕಣ್ಣೂರು ಕುಟ್ಯಾಟೂರ್ ಕಾರರಂಬ್ ನಿವಾಸಿಗಳಾದ ಪ್ರಜಿತ್ ಮತ್ತು ಅವರ ಪತ್ನಿ ರಿಷಾ ಮೃತಪಟ್ಟವರು. ಗರ್ಭಿಣಿಯಾದ ಪತ್ನಿಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ನಡುವೆ ಈ ಘಟನೆಯು ಕಣ್ಣೂರು ನಗರದ ಜಿಲ್ಲಾ ಆಸ್ಪತ್ರೆ ಬಳಿ ನಡೆದಿದೆ. ಕಾರಿನಲ್ಲಿ ಆರು ಮಂದಿ ಇದ್ದರು. ಕಾರು ಚಲಾಯಿಸುತ್ತಿದ್ದ ಗರ್ಭಿಣಿ ಹಾಗೂ ಆಕೆಯ ಪತಿ ಮುಂದಿನ ಸೀಟಿನಲ್ಲಿ ಹಾಗೂ ನಾಲ್ವರು ಹಿಂದಿನ ಸೀಟಿನಲ್ಲಿದ್ದರು.

ಬೆಂಕಿ ಕಾಣಿಸಿಕೊಂಡಾಗ ಹಿಂದಿನ ಬಾಗಿಲು ತೆಗೆದ ಬಳಿಕ ಮುಂದಿನ ಬಾಗಿಲಿನಿಂದ ಇಳಿಯುವ ಮೊದಲೇ ಬೆಂಕಿ ಆವರಿಸಿಕೊಂಡು ಸಿಲುಕಿದ್ದರು, ಇದರಿಂದ ಇಬ್ಬರಿಗೂ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವಾಹನ ಚಲಾಯಿಸುತ್ತಿದ್ದ ಪತಿಯೊಂದಿಗೆ ಪತ್ನಿ ಮುಂಭಾಗದಲ್ಲಿದ್ದರು. ಹಿಂದೆ ಒಂದು ಮಗು ಸೇರಿ ನಾಲ್ವರು ಇದ್ದರು. ಮತ್ತೊಂದು ವಾಹನದಲ್ಲಿ ಬಂದವರಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಡೋರ್ ಜಾಮ್ ಆಗಿದ್ದರಿಂದ ವಾಹನದಲ್ಲಿದ್ದವರು ಹೊರಬರಲು ಸಾಧ್ಯವಾಗಲಿಲ್ಲ.

ಬೆಂಕಿ ಹರಡುತ್ತಿದ್ದಂತೆ ಚಾಲಕ ಪ್ರಜಿತ್ ಹಿಂಬಾಗಿಲನ್ನು ತೆರೆದಿದ್ದಾನೆ. ಹಿಂಬದಿ ಸೀಟಿನಲ್ಲಿದ್ದ ಮಗು ಸೇರಿ ನಾಲ್ವರು ಪಾರಾಗಿದ್ದಾರೆ. ಆದರೆ ಮುಂಬಾಗಿಲು ತೆರೆಯಲಾಗಲಿಲ್ಲ. ಅಷ್ಟರೊಳಗೆ ಬೆಂಕಿ ಮತ್ತಷ್ಟು ವ್ಯಾಪಿಸಿದೆ. ಬದುಕುಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ ಸುಮಾರು ನೂರು ಮೀಟರ್ ದೂರದಲ್ಲಿ ಅಗ್ನಿಶಾಮಕ ಠಾಣೆ ಇದ್ದರೂ ಇಬ್ಬರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಅಷ್ಟು ವೇಗದಲ್ಲಿ ಕಾರಿಗೆ ಬೆಂಕಿ ಆವರಿಸಿಕೊಂಡಿತ್ತು.
In a tragic incident two people, including a pregnant woman, were burned to death when the car in which they were travelling suddenly caught fire in Kannur on Thursday morning. The deceased have been identified as Prajith (32) and his wife Reesha (26), both natives of Karam in Kuttiattoor.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm