ಬ್ರೇಕಿಂಗ್ ನ್ಯೂಸ್
02-02-23 04:52 pm HK News Desk ದೇಶ - ವಿದೇಶ
ಕೇರಳ, ಫೆ.2: ಸಂಚರಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಗರ್ಭಿಣಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ಕಣ್ಣೂರಿನಲ್ಲಿ ಗುರುವಾರ ನಡೆದಿದೆ.
ಕಾರಿನಲ್ಲಿದ್ದ 6 ಜನರ ಪೈಕಿ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡೋರ್ ಜಾಮ್ ಆಗಿ ಮುಂದೆ ಇದ್ದವರು ಹೊರಬರಲಾರದೇ ಸಾವನ್ನಪ್ಪಿದ್ದಾರೆ.
ಕಣ್ಣೂರು ಕುಟ್ಯಾಟೂರ್ ಕಾರರಂಬ್ ನಿವಾಸಿಗಳಾದ ಪ್ರಜಿತ್ ಮತ್ತು ಅವರ ಪತ್ನಿ ರಿಷಾ ಮೃತಪಟ್ಟವರು. ಗರ್ಭಿಣಿಯಾದ ಪತ್ನಿಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ನಡುವೆ ಈ ಘಟನೆಯು ಕಣ್ಣೂರು ನಗರದ ಜಿಲ್ಲಾ ಆಸ್ಪತ್ರೆ ಬಳಿ ನಡೆದಿದೆ. ಕಾರಿನಲ್ಲಿ ಆರು ಮಂದಿ ಇದ್ದರು. ಕಾರು ಚಲಾಯಿಸುತ್ತಿದ್ದ ಗರ್ಭಿಣಿ ಹಾಗೂ ಆಕೆಯ ಪತಿ ಮುಂದಿನ ಸೀಟಿನಲ್ಲಿ ಹಾಗೂ ನಾಲ್ವರು ಹಿಂದಿನ ಸೀಟಿನಲ್ಲಿದ್ದರು.

ಬೆಂಕಿ ಕಾಣಿಸಿಕೊಂಡಾಗ ಹಿಂದಿನ ಬಾಗಿಲು ತೆಗೆದ ಬಳಿಕ ಮುಂದಿನ ಬಾಗಿಲಿನಿಂದ ಇಳಿಯುವ ಮೊದಲೇ ಬೆಂಕಿ ಆವರಿಸಿಕೊಂಡು ಸಿಲುಕಿದ್ದರು, ಇದರಿಂದ ಇಬ್ಬರಿಗೂ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವಾಹನ ಚಲಾಯಿಸುತ್ತಿದ್ದ ಪತಿಯೊಂದಿಗೆ ಪತ್ನಿ ಮುಂಭಾಗದಲ್ಲಿದ್ದರು. ಹಿಂದೆ ಒಂದು ಮಗು ಸೇರಿ ನಾಲ್ವರು ಇದ್ದರು. ಮತ್ತೊಂದು ವಾಹನದಲ್ಲಿ ಬಂದವರಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಡೋರ್ ಜಾಮ್ ಆಗಿದ್ದರಿಂದ ವಾಹನದಲ್ಲಿದ್ದವರು ಹೊರಬರಲು ಸಾಧ್ಯವಾಗಲಿಲ್ಲ.

ಬೆಂಕಿ ಹರಡುತ್ತಿದ್ದಂತೆ ಚಾಲಕ ಪ್ರಜಿತ್ ಹಿಂಬಾಗಿಲನ್ನು ತೆರೆದಿದ್ದಾನೆ. ಹಿಂಬದಿ ಸೀಟಿನಲ್ಲಿದ್ದ ಮಗು ಸೇರಿ ನಾಲ್ವರು ಪಾರಾಗಿದ್ದಾರೆ. ಆದರೆ ಮುಂಬಾಗಿಲು ತೆರೆಯಲಾಗಲಿಲ್ಲ. ಅಷ್ಟರೊಳಗೆ ಬೆಂಕಿ ಮತ್ತಷ್ಟು ವ್ಯಾಪಿಸಿದೆ. ಬದುಕುಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ ಸುಮಾರು ನೂರು ಮೀಟರ್ ದೂರದಲ್ಲಿ ಅಗ್ನಿಶಾಮಕ ಠಾಣೆ ಇದ್ದರೂ ಇಬ್ಬರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಅಷ್ಟು ವೇಗದಲ್ಲಿ ಕಾರಿಗೆ ಬೆಂಕಿ ಆವರಿಸಿಕೊಂಡಿತ್ತು.
In a tragic incident two people, including a pregnant woman, were burned to death when the car in which they were travelling suddenly caught fire in Kannur on Thursday morning. The deceased have been identified as Prajith (32) and his wife Reesha (26), both natives of Karam in Kuttiattoor.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm