ಬ್ರೇಕಿಂಗ್ ನ್ಯೂಸ್
06-02-23 10:53 am HK News Desk ದೇಶ - ವಿದೇಶ
ಢಾಕಾ, ಫೆ.6: ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ವಾಯುವ್ಯ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ಶನಿವಾರ ರಾತ್ರಿ ಸರಣಿ ದಾಳಿ ನಡೆಸಿದ್ದಾರೆ.
ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದ್ದು, ವಿಗ್ರಹಗಳನ್ನು ಧ್ವಂಸ ಮಾಡಲಾಗಿದೆ. ಘಟನೆಯ ನಂತರ, ಬಾಂಗ್ಲಾದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಜೀವ ಮತ್ತು ಆಸ್ತಿಯ ಬಗ್ಗೆ ಭಯಭೀತರಾಗಿದ್ದಾರೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿ ಹಿಂದೂಗಳಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.



ವರದಿ ಪ್ರಕಾರ, ವಿಧ್ವಂಸಕ ಘಟನೆಯು ಬಾಂಗ್ಲಾದೇಶದ ವಾಯುವ್ಯ ಪ್ರದೇಶದ ಠಾಕೂರ್ಗಾಂವ್ ಪರಿಸರದಲ್ಲಿ ನಡೆದಿದೆ. ಗ್ರಾಮದಲ್ಲಿ ವಾಸಿಸುವ ಹಿಂದೂ ಸಮುದಾಯದ ಮುಖಂಡ ಬಿದ್ಯನಾಥ್ ಬರ್ಮನ್ ಪ್ರಕಾರ, ಶನಿವಾರ ರಾತ್ರಿ ಮತ್ತು ಭಾನುವಾರದ ನಸುಕಿನಲ್ಲಿ ಅಪರಿಚಿತರು ಕತ್ತಲಿನ ಸಮಯದಲ್ಲಿ ದೇವಾಲಯಗಳ ಮೇಲೆ ಯೋಜಿತ ರೀತಿಯಲ್ಲಿ ದಾಳಿ ನಡೆಸಿದ್ದಾರೆ. ಕೋಲು ಮತ್ತಿತರ ಆಯುಧಗಳೊಂದಿಗೆ ಬಂದ ದುಷ್ಕರ್ಮಿಗಳು 14 ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ಈ ಸಂದರ್ಭದಲ್ಲಿ, ಅನೇಕ ವಿಗ್ರಹಗಳನ್ನು ಮುರಿದು ಕೆರೆ, ಕೊಳಕ್ಕೆ ಎಸೆದಿದ್ದಾರೆ.


ದೇವಾಲಯಗಳ ಮೇಲೆ ದಾಳಿ ನಡೆಸಿದವರು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಬರ್ಮನ್ ಹೇಳಿದ್ದಾರೆ. ಕತ್ತಲೆಯಿಂದಾಗಿ ಯಾರೂ ಅವರನ್ನು ನೋಡಲಿಲ್ಲ. ಘಟನೆ ಬೆಳಕಿಗೆ ಬಂದಿದ್ದರಿಂದ ಈ ಪ್ರದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಸುರಕ್ಷತೆಯ ಬಗ್ಗೆ ಚಿಂತಿತರಾಗಿದ್ದಾರೆ ಮತ್ತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು. ಮುಸ್ಲಿಂ ಬಾಂಧವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಈವರೆಗೂ ಈ ರೀತಿಯ ಘಟನೆ ಇಲ್ಲಿ ನಡೆದದ್ದಿಲ್ಲ. ಇಲ್ಲಿ ಮುಸ್ಲಿಮರು ಮೆಜಾರಿಟಿ ಇದ್ದರೂ, ನಾವು ಸೌಹಾರ್ದ ಹೊಂದಿದ್ದೆವು. ಇದು ಯಾರೋ ಕಿಡಿಗೇಡಿಗಳು ಸಾನರಸ್ಯ ಕದಡುವುದಕ್ಕಾಗಿ ನಡೆಸಿರುವ ಕೃತ್ಯ ಎಂದು ಹಿಂದು ಸಮುದಾಯದ ನಾಯಕ ಸಮರ್ ಚಟರ್ಜಿ ಹೇಳಿದ್ದಾರೆ.
14 Hindu temples were vandalised by unidentified miscreants in northwestern Bangladesh in a series of orchestrated attacks overnight, police said on Sunday, as reported by the news agency PTI. "Unidentified people carried out the attacks under the cover of darkness, vandalising idols in 14 temples in three unions (lowest local government tier)," said Bidyanath Barman, a Hindu community leader at Baliadangi) “upazila” or “sub-district” in Thakurgaon.
30-12-25 03:08 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣ ; ಮೂರು ಪೊಲೀಸ್...
29-12-25 11:13 pm
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
30-12-25 12:42 pm
Mangalore Correspondent
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm